ಹೊಸ ವರ್ಷಕ್ಕೆ ಸಭೆ ಕರೆದ ಬಿಸಿಸಿಐ

ಕಳೆದ ಕೆಲ ವರ್ಷಗಳಿಂದ ಐಸಿಸಿ ಟೂರ್ನಿಗಳಲ್ಲಿ ಮತ್ತು ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾ ಸೋಲು ಕಂಡ ಬಗ್ಗೆ ಪರಾಮರ್ಶಿಸುವ ಸಲುವಾಗಿ ಬಿಸಿಸಿಐ(BCCI Meeting) ಮಹತ್ವದ ಸಭೆ ಕರೆದಿದೆ. ಈ ಮೂಲಕ ವರ್ಷಾರಂಭದಲ್ಲೇ ಬಿಸಿಸಿಐ ಮೇಜರ್​ ಸರ್ಜರಿ ನಡೆಸಲು ಮುಂದಾಗಿದೆ.ಇದರೊಂದಿಗೆ ಟೀಮ್ ಇಂಡಿಯಾದಲ್ಲಿ ಹೊಸ ಯುಗ ಆರಂಭವಾಗುವ ಸೂಚನೆ ಲಭಿಸಿದೆ.ಭಾನುವಾರ(ಜನವರಿ 1) ಮುಂಬಯಿಯಲ್ಲಿ ಸಭೆ ನಡೆಯಲಿದೆ. ಅದರಂತೆ ಈ ಸಭೆಯಲ್ಲಿ ಪಾಲ್ಗೊಳ್ಳಲು ರೋಹಿತ್ ಶರ್ಮ, ರಾಹುಲ್​ ದ್ರಾವಿಡ್​, ವಿವಿಎಸ್​ ಲಕ್ಷ್ಮಣ್ ಮತ್ತು ಚೇತನ್​ ಶರ್ಮಾಗೆ ಬಿಸಿಸಿಐ ಸೂಚನೆ ನೀಡಿದೆ. ಸಭೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ಅಧ್ಯಕ್ಷ ರೋಜರ್​ ಬಿನ್ನಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಬಿಸಿಸಿಐ ಈ ಸಭೆ ಕರೆದಿರುವುದು ಕುತೂಹಲ ಮೂಡಿಸಿದೆ.ಲಂಕಾ ವಿರುದ್ಧದ ಸರಣಿ ಜನವರಿ 3ರಿಂದ ಆರಂಭವಾಗಲಿದೆ. ಇನ್ನು ಈ ಸಭೆಯಲ್ಲಿ ಟಿ20 ಸೋಲಿಗೆ ಕಾರಣ ಮತ್ತು ನಾಯಕತ್ವದ ಬದಲಾವಣೆ ಜತೆಗೆ ಟಿ20 ಮಾದರಿಗೆ ನೂತನ ಕೋಚ್​ ನೇಮಕ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.ಮೂಲಗಳ ಪ್ರಕಾರ ಟೀಮ್​ ಇಂಡಿಯಾದ ಟಿ20 ಕ್ರಿಕೆಟ್​ಗೆ ವಿವಿಎಸ್​ ಲಕ್ಷ್ಮಣ್​ ಅವರನ್ನು ಕೋಚ್​ ಆಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈಗಾಗಲೇ ಅವರು ದ್ರಾವಿಡ್​ ಅನುಪಸ್ಥಿತಿಯಲ್ಲಿ ಹಲವು ಬಾರಿ ತಂಡದ ಕೋಚ್​ ಆಗಿ ಕರ್ತವ್ಯ ನಿರ್ವಹಿಸಿ ಯಶಸ್ಸು ಕಂಡಿದ್ದಾರೆ. ಈ ನಿಟ್ಟಿನಲ್ಲಿ ಅವರನ್ನು ಸಭೆಯಲ್ಲಿ ಪಾಲ್ಗೊಳ್ಳಲು ಬಿಸಿಸಿಐ ಆಹ್ವಾನಿಸಿದೆ ಎಂದು ತಿಳಿದುಬಂದಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲೋಕನಾಥ್ ಮಹಾನ್ ಕಲಾವಿದ

Sat Dec 31 , 2022
ನಾಗರಹಾವು ಚಿತ್ರದಲ್ಲಿ ರಾಮಾಚಾರಿ ಕಾಪಿ ಹೊಡೆದಾಗ ಆತನನ್ನು ಅವಮಾನಿಸಿದ್ದಕ್ಕಾಗಿ, ಆತನಿಂದ ಲೈಟು ಕಂಬಕ್ಕೆ ಕಟ್ಟಲ್ಪಟ್ಟ ಪ್ರಿನ್ಸಿಪಾಲ್ ಶ್ಯಾಮರಾಯರಾಗಿ, ಬೂತಯ್ಯನ ಮಗ ಅಯ್ಯು ಚಿತ್ರದಲ್ಲಿ ಚಪ್ಪಲಿ ಹೊಲೆಯುವ ಮಾಚನಾಗಿ; ಅದರಲ್ಲೂ ಬೂತಯ್ಯನ ಮನೆ ಉಪ್ಪಿನಕಾಯಿ ಜಾಡಿ ಕಾಲಿ ಮಾಡುವ ಅವರ ಅಭಿನಯ ಕನ್ನಡ ಚಲನಚಿತ್ರರಂಗ ಇರುವವರೆಗೂ ಅಜರಾಮರ. ಸಂಸ್ಕಾರ, ಮಿಂಚಿನ ಓಟ, ಕಾಕನ ಕೋಟೆ, ಕಾಡು ಬೆಳದಿಂಗಳು ಮುಂತಾದ ಕಲಾತ್ಮಕ ಚಿತ್ರಗಳಲ್ಲಿನ ನಿರ್ವಹಣೆಗೆ, ಒಲವಿನ ಆಸರೆ, ಮನೆ ಮನೆ ಕಥೆ, ಹೌಸ್ […]

Advertisement

Wordpress Social Share Plugin powered by Ultimatelysocial