ನವದೆಹಲಿ: ಬುಧವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 71,365 ಹೊಸ ಸೋಂಕಿತರು ಪತ್ತೆಯಾಗಿದ್ದರೆ,

ನವದೆಹಲಿ: ಬುಧವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 71,365 ಹೊಸ ಸೋಂಕಿತರು ಪತ್ತೆಯಾಗಿದ್ದರೆ, 1,217 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸತತ ಮೂರನೇ ದಿನವೂ ದೇಶದಲ್ಲಿ ಹೊಸ ಸೋಂಕಿನ ಪ್ರಮಾಣ ಲಕ್ಷಕ್ಕಿಂತ ಕೆಳಗೇ ದಾಖಲಾದಂತೆ ಆಗಿದೆ.ದೇಶದಲ್ಲಿಂದು 71,365 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,24,10,976ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,05,279ಕ್ಕೆ ತಲುಪಿದೆ.ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8,92,828ಕ್ಕೆ ತಲುಪಿದೆ.ಈ ನಡುವೆ ಕಳೆದ 24 ಗಂಟೆಗಳಲ್ಲಿ , 1,72,211 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,10,12,869ಕ್ಕೆ ತಲುಪಿದೆ.ಇನ್ನು ಭಾರತದಲ್ಲಿ ಒಂದೇ 13,46,534ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,29,08,121 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,70,87,06,705 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಂಡ್ಯದಲ್ಲಿ ನಾಲ್ವರು ಮಕ್ಕಳನ್ನು ಕೊಂದಿದ್ದ ಹಂತಕಿ ಅರೆಸ್ಟ್

Wed Feb 9 , 2022
  ಮಂಡ್ಯ: ಮಂಡ್ಯದಲ್ಲಿ ಒಂದೇ ಕುಟುಂಬದ 5 ಜನರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಕರಿಂದಲೇ ಹತ್ಯೆಯಾಗಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.26 ವರ್ಷದ ಲಕ್ಷ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯ ಗಂಡ ಗಂಗಾರಾಮ್ ಮೇಲೆ ಲಕ್ಷ್ಮಿಗೆ ಪ್ರೀತಿ ಇರುತ್ತದೆ.ಗಂಗಾರಾಮನನ್ನು ಪ್ರೀತಿಸುತ್ತಿದ್ದ ಲಕ್ಷ್ಮಿ ಆತನ ಸಂಬಂಧಿಯಾಗಿದ್ದು, ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು.   ಆಂಧ್ರಪ್ರದೇಶದಲ್ಲಿ ವಾಸವಾಗಿದ್ದ ಹಂತಕಿ ಲಕ್ಷ್ಮಿ ಕಳೆದ ಎರಡು ತಿಂಗಳಿನಿಂದ ಮೈಸೂರಿನಲ್ಲಿ ವಾಸವಾಗಿದ್ದಳು. ಮಂಡ್ಯ ಜಿಲ್ಲೆ ಕೆ.ಆರ್.ಎಸ್. ಠಾಣೆ ಪೊಲೀಸರು ಐವರನ್ನು ಕೊಲೆ […]

Advertisement

Wordpress Social Share Plugin powered by Ultimatelysocial