ಭಿಕ್ಷುಕಿಯನ್ನು ಎಳೆದಾಡಿ ಕೊಂದ ಬೀದಿ ನಾಯಿಗಳು

ಭಿಕ್ಷುಕಿಯೊಬ್ಬಳನ್ನು ಬೀದಿ ನಾಯಿಗಳು ಎಳೆದಾಡಿ ಕೊಂದು ಹಾಕಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಸಂಭವಿಸಿದೆ.ಉಪ್ಪಿನ ಬೆಟಗೇರಿಯ ಖಬರಸ್ತಾನ್ ಬಳಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಭಿಕ್ಷುಕಿ ಖಬರಸ್ತಾನ್ ಬಳಿ ಮಲಗಿಕೊಂಡಿದ್ದ ವೇಳೆ ಸುಮಾರು 15-20 ಬೀದಿ ನಾಯಿಗಳು ಆಕೆಯ ಮೇಲೆ ಏಕಾಏಕಿ ದಾಳಿ ಮಾಡಿವೆ. ಅಲ್ಲದೇ ಆಕೆಯನ್ನು ಎಳೆದಾಡಿ ತೊಡೆ, ಕೈಗಳಿಗೆ ಬಲವಾಗಿ ಕಚ್ಚಿ ಗಾಯ ಮಾಡಿವೆ. ಇದರಿಂದ ಆ ಭಿಕ್ಷುಕಿ ಸ್ಥಳದಲ್ಲೇ ಅಸುನೀಗಿದ್ದಾಳೆ. ಸಾವನ್ನಪ್ಪಿದ ಮಹಿಳೆಯ ಹೆಸರು, ವಿಳಾಸ ತಿಳಿದುಬಂದಿಲ್ಲ.ಘಟನೆಯನ್ನು ನೋಡಿದ ಸ್ಥಳೀಯರು ಗರಗ ಠಾಣೆ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ರೀತಿ ಭಿಕ್ಷುಕಿ ಮೇಲೆ ದಾಳಿ ಮಾಡಿ ಕೊಂದು ಹಾಕಿದ ಬೀದಿ ನಾಯಿಗಳ ಹಾವಳಿ ತಡೆಗಟ್ಟಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಯಂಕ್ ಪಡೆಗೆ ಅಗ್ರಸ್ಥಾನ ಉಳಿಸಿಕೊಳ್ಳುವ ಛಲ.

Tue Jan 10 , 2023
  ಬೆಂಗಳೂರು: ಮಯಂಕ್ ಅಗರವಾಲ್ ನಾಯಕತ್ವದ ಬಳಗವು ಆಲೂರಿನ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನವನ್ನು ಎದುರಿಸಲಿದೆ.ಸದ್ಯ ಸಿ ಗುಂಪಿನ ಪಾಯಿಂಟ್ ಪಟ್ಟಿಯ ಅಗ್ರಸ್ಥಾನದಲ್ಲಿರುವ ಕರ್ನಾಟಕದ ಖಾತೆಯಲ್ಲಿ 19 ಅಂಕಗಳಿವೆ.ಎರಡನೇ ಸ್ಥಾನದಲ್ಲಿರುವ ರಾಜಸ್ಥಾನದ ಬಳಿ 14 ಅಂಕಗಳಿವೆ. ಕ್ವಾರ್ಟರ್‌ಫೈನಲ್ ತಲುಪಬೇಕಾದರೆ ತಂಡವು ತನ್ನ ಮೊದಲ ಸ್ಥಾನವನ್ನು ಕಾಯ್ದುಕೊಳ್ಳುವುದು ಮುಖ್ಯ. ರಾಜಸ್ಥಾನ ಎದುರು ಸೇರಿದಂತೆ ಇನ್ನೂ ಮೂರು ಪಂದ್ಯಗಳನ್ನು ಮಯಂಕ್ ಬಳಗ ಆಡಬೇಕಿದೆ.ವೇಳಾಪಟ್ಟಿಯ ಪ್ರಕಾರ ಕರ್ನಾಟಕ ತಂಡವು ತವರಿನಲ್ಲಿ ಆಡುತ್ತಿರುವ […]

Advertisement

Wordpress Social Share Plugin powered by Ultimatelysocial