ಕ್ಷಮೆ ಕೇಳುವಂತೆ ರಮೇಶ್ ಜಾರಕಿಹೊಳಿಗೆ ಆಗ್ರಹ.

ಬೆಳಗಾವಿ: ತಾಲ್ಲೂಕಿನ ಸುಳೇಬಾವಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ‘ಸಮಾಜಕ್ಕೆ ಕೆಟ್ಟ ಹುಳ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿಕೆ ನೀಡಿರುವುದು ಸರಿಯಲ್ಲ. ಕೂಡಲೇ ಅವರು ಕ್ಷಮೆ ಕೇಳಬೇಕು ಎಂದು ಪಂಚಮಸಾಲಿ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಕೆ.ಪಾಟೀಲ ಒತ್ತಾಯಿಸಿದರು.

ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವುದೇ ನಾಯಕರು ಕೀಳುಮಟ್ಟದ ಪದ ಬಳಸಿ ಇಂತಹ ಹೇಳಿಕೆ ಕೊಡಬಾರದು. ಇದು ನಿಮಗೆ ಶೋಭೆ ತರುವುದಿಲ್ಲ’ ಎಂದರು.

‘ಸಚಿವ ಮುರುಗೇಶ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪರಸ್ಪರವಾಗಿ ಕೆಟ್ಟ ಶಬ್ದ ಬಳಸಿ ಆರೋಪ, ಪ್ರತ್ಯಾರೋಪ ಮಾಡಿರುವುದನ್ನು ಖಂಡಿಸುತ್ತೇವೆ’ ಎಂದರು.

ಅಡಿವೇಶ ಇಟಗಿ, ರಾಮನಗೌಡ ಪಾಟೀಲ, ರಾಜು ಮಗದುಮ್ಮ ಇತರರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗೂಳಿಪುರ ಗ್ರಾಮದ ಶ್ರೀ.ವಿ.ಮಹಾಂತ ದೇವರ ಸರ್ಕಾರಿ ಪ್ರೌಢ ಶಾಲೆ.

Mon Jan 23 , 2023
ಗೂಳಿಪುರ ಗ್ರಾಮದ ಮಹಾಂತದೇವರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದಿಂದ ನಡೆದ ಕಲಿಕಾ ಹಬ್ಬ…. ಚಾಮರಾಜನಗರ ತಾಲ್ಲೂಕಿನ ಗೂಳಿಪುರ ಗ್ರಾಮದ ಶ್ರೀ.ವಿ.ಮಹಾಂತ ದೇವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ, ಸಮೂಹ ಸಂಪನ್ಮೂಲ ಕೇಂದ್ರ ಕಾಗಲವಾಡಿ ಇವರ ಸಂಯುಕ್ತಶ್ರಯದಲ್ಲಿ ಕಲಿಕಾ ಹಬ್ಬವನ್ನು ನಡೆಸಲಾಯಿತು….. ಬೆಳಿಗ್ಗೆ ಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಲಶ ಒತ್ತು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಶಾಲಾ ಮಕ್ಕಳು ವಿವಿಧ […]

Advertisement

Wordpress Social Share Plugin powered by Ultimatelysocial