ಬೆಳಗಾವಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ಬೆಳಗಾವಿಯಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ನಿಲ್ದಾಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ನೂರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ಕುರಿತು ಮಾತನಾಡಿದ ಕೆಎಸ್ಆರ್ಟಿಸಿ ಡಿಸಿ ಎಂ ಆರ್ ಮುಂಜಿ, ರೈತರ ಪ್ರತಿಭಟನೆಯಿಂದಾಗಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ ನೂರಾರು ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ. ಹೀಗಾಗಿ ರೈತರು ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿ : ಕುತೂಹಲ ಕೆರಳಿಸಿದ ಸಿಎಂ-ವಿನಯ್ ಗುರೂಜಿ ದಿಢೀರ್ ಭೇಟಿ

 

 

Please follow and like us:

Leave a Reply

Your email address will not be published. Required fields are marked *

Next Post

ಭಾರತ್ ಬಂದ್  ಹಿನ್ನೆಲೆ-ರೈತ ಮುಖಂಡರಿಂದ ಬೃಹತ್ ಪ್ರತಿಭಟನೆ

Tue Dec 8 , 2020
ಇಂದು ಭಾರತ್ ಬಂದ್ ಹಿನ್ನೆಲೆ ರೈತ ಮುಖಂಡರಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು. ಕುರುಬೂರು ಶಾಂತಕುಮಾರ್ ಹಾಗೂ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಕರ್ನಾಟಕ ಬಂದ್ ಬೇನ್ನಲೇ ಭಾರತ್ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ.   ಸರ್ಕಾರದ ಭೂ ಸುಧಾರಣ ಕಾಯ್ದೆ, ಎಪಿಎಂಸಿ ಕಾಯ್ದೆ, ಗ್ರಾಹಕ ವಿರೋದಿಕಾಯ್ದೆ ಹಾಗೂ ಇತರೆ ಕಾಯ್ದೆಗಳನ್ನ ವಾಪಸ್ ಪಡೆಯುವಂತೆ ಒತ್ತಾಯ  ಮಾಡಲಾಗುವುದು ಎಂದು ರೈತ ಮುಂಖಡರು ತಿಳಿಸಿದ್ದಾರೆ. ಇದನ್ನೂ ಓದಿ: ಕರೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ- ಕೆಪಿಸಿಸಿ […]

Advertisement

Wordpress Social Share Plugin powered by Ultimatelysocial