ಬೆಳಕವಾಡಿ ಶ್ರೀನಿವಾಸ ಅಯ್ಯಂಗಾರ್

ಮಹಾನ್ ಸಂಗೀತಕಾರರಾದ ಬೆಳಕವಾಡಿ ಶ್ರೀನಿವಾಸ ಅಯ್ಯಂಗಾರ್ ಎಂಬುದು ತಂದೆ ಮಗ ಇಬ್ಬರದೂ ಒಂದೇ ಹೆಸರು. ಹಿರಿಯ ಬೆಳಕವಾಡಿ ಶ್ರೀನಿವಾಸ ಅಯ್ಯಂಗಾರ್ ಅವರ ಕಾಲ 1888-1936. ಇಂದು ಕಿರಿಯ ಬೆಳಕವಾಡಿ ಶ್ರೀನಿವಾಸ ಅಯ್ಯಂಗಾರ್ ಅವರ ಜನ್ಮ ದಿನ ಸ್ಮರಣೆ.
ಗಾನ ಕಲಾ ಭೂಷಣರೆನಿಸಿದ್ದ ಶ್ರೀನಿವಾಸ ಅಯ್ಯಂಗಾರ್ಯರು ಮಂಡ್ಯ ಜಿಲ್ಲೆಗೆ ಸೇರಿದ ಬೆಳಕವಾಡಿಯಲ್ಲಿ 1910ರ ಮಾರ್ಚ್ 9ರಂದು ಜನಿಸಿದರು. ತಂದೆ ಶ್ರೀನಿವಾಸ ಅಯ್ಯಂಗಾರ್ಯರು. ತಾಯಿ ಲಕ್ಷ್ಮಮ್ಮ. ಮೂರು ವರ್ಷದವರಾಗಿದ್ದಾಗಲೇ ತಾಯಿಯ ಪ್ರೀತಿಯಿಂದ ವಂಚಿತರಾದರು. ಶಾಲೆಯ ಕಲಿಕೆಯ ಜೊತೆಗೆ ತಿಟ್ಟೆ ಕೃಷ್ಣ ಅಯ್ಯಂಗಾರ್ಯರಲ್ಲಿ ಸಂಗೀತ ಕಲಿತರು. ತಂದೆಯ ಜೊತೆಯಲ್ಲಿ ಸಹ ಗಾಯಕರಾಗಿಯೂ ಅನೇಕ ಸಂಗೀತ ಕಾರ್ಯಕ್ರಮಗಳನ್ನು ನೀಡಿದರು.
ಶ್ರೀನಿವಾಸ ಅಯ್ಯಂಗಾರ್ಯರು ಮದರಾಸು ವಿಶ್ವವಿದ್ಯಾಲಯದ ಸಂಗೀತದ ಡಿಪ್ಲೋಮಾ ಪಡೆದರು (೧೯೩೧-೩೨). ಅಲ್ಲಿನದು ಸಂಜೆ ತರಗತಿಗಳಾಗಿದ್ದು ಟೈಗರ್ ವರದಾಚಾರ್ಯರು ಪ್ರಾಂಶುಪಾಲರಾಗಿದ್ದರು. ಬೆಳಗಿನ ವೇಳೆ ಮುತ್ತಯ್ಯ ಭಾಗವತರು ಪ್ರಾಂಶುಪಾಲರಾಗಿದ್ದ ಮದರಾಸು ಮ್ಯೂಸಿಕ್ ಅಕಾಡಮಿಯಲ್ಲಿ ಪಾಠವಾಗುತ್ತಿತ್ತು. ಹೀಗೆ ಎರಡೂ ವೇಳೆ ಸಂಗೀತ ಕಲಿಕೆ ನಡೆಯುತ್ತಿತ್ತು. ಅನೇಕ ವಿದ್ವಾಂಸರ ಸಂಗೀತ ಕಚೇರಿ ಆಲಿಸುತ್ತಾ, ಗುರುಗಳೊಂದಿಗೆ ಚರ್ಚಿಸುತ್ತಾ, ಕಲಿಯತ್ತಾ ಬೆಳೆದರು.
ಶ್ರೀನಿವಾಸ ಅಯ್ಯಂಗಾರ್ಯರು ಮೈಸೂರಿಗೆ ಹಿಂದಿರುಗಿದ ನಂತರ ಪಾಶ್ಚಾತ್ಯ ಸಂಗೀತ ಕಲಿತರು. 1939ರಲ್ಲಿ ಲಂಡನ್ನಿನ ಟ್ರಿನಿಟಿ ಕಾಲೇಜಿನ ಸಂಗೀತದ ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಮೊದಲ ಶ್ರೇಣಿ ಗಳಿಸಿ, ಬೆಂಗಳೂರಿನ ವಾಣಿವಿಲಾಸ ಇನ್‌ಸ್ಟಿಟ್ಯೂಟಿನಲ್ಲಿ ಸಂಗೀತದ ಅಧ್ಯಾಪಕರಾಗಿ ನೇಮಕಗೊಂಡರು. ಕೆಲಕಾಲ ಮೈಸೂರಿನ ಸರಕಾರಿ ಟ್ರೈನಿಂಗ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿದರು. ಶ್ರೀನಿವಾಸ ಅಯ್ಯಂಗಾರ್ಯರು ಜಯಚಾಮರಾಜ ಒಡೆಯರಿಂದ ಆಸ್ಥಾನ ವಿದ್ವಾಂಸರಾಗಿ ನೇಮಕಗೊಂಡರು. ಕೆಲಕಾಲ ಕರ್ನಾಟಕ ಸರಕಾರದ ಪರೀಕ್ಷಾ ಮಂಡಲಿ, ಆಕಾಶವಾಣಿ ಆಡಿಶನ್ ಮಂಡಳಿಯ ತೀರ್ಪುಗಾರರ ಜವಾಬ್ದಾರಿ ನಿರ್ವಹಿಸಿದರು.
ಶ್ರೀನಿವಾಸ ಅಯ್ಯಂಗಾರ್ಯರು ಸಾಹಿತ್ಯ ರಚನೆಯಲ್ಲೂ ತೊಡಗಿ ಮಹಾ ವೈದ್ಯನಾಥ ಅಯ್ಯರ್, ಮುತ್ತಯ್ಯ ಭಾಗವತರ್, ಟೈಗರ್ ವರದಾಚಾರ್ ಮುಂತಾದವರ ಬಗ್ಗೆ ಜೀವನ ಚರಿತ್ರೆಗಳನ್ನು ಬರೆದರು.
ಬೆಳಕವಾಡಿ ಶ್ರೀನಿವಾಸ ಅಯ್ಯಂಗಾರ್ಯರಿಗೆ 1928ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತ ಓರಿಯಂಟರ್ ಕಾನ್‌ಫರೆನ್ಸ್ ಕಚೇರಿಯಲ್ಲಿ ಪ್ರಶಸ್ತಿ, 1980ರಲ್ಲಿ ಕರ್ನಾಟಕ ಗಾನಕಲಾ ಪರಿಷತ್ ಸಂಗೀತ ಸಮ್ಮೇಳನದ ಅಧ್ಯಕ್ಷತೆ-ಗಾನಕಲಾ ಭೂಷಣ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಂಗೀತ ನೃತ್ಯ ಅಕಾಡಮಿಯಿಂದ ಕರ್ನಾಟಕ ಕಲಾ ತಿಲಕ ಬಿರುದು, ಬೆಂಗಳೂರಿನ ಗಾಯನ ಸಮಾಜ, ತ್ಯಾಗರಾಜ ಗಾನಸಭಾ, ನಂದಿನಿ ರಸಿಕ ಸಭಾ ಮುಂತಾದ ಸಂಸ್ಥೆಗಳಿಂದ ಸನ್ಮಾನಗಳು ಹೀಗೆ ಅನೇಕ ಗೌರವಗಳು ಸಂದಿದ್ದವು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳ ಭದ್ರತೆಯನ್ನು ಉಲ್ಲಂಘಿಸಿದ ಬಗ್ಗೆ ಮೌನ ಮುರಿದಿದ್ದ,ಜಸ್ಪ್ರೀತ್ ಬುಮ್ರಾ!

Wed Mar 16 , 2022
ಸಣ್ಣ ಭದ್ರತಾ ಉಲ್ಲಂಘನೆಯಲ್ಲಿ, ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್‌ನ ಎರಡನೇ ದಿನದ ಅಂತ್ಯದ ವೇಳೆಗೆ ಮೂವರು ಅಭಿಮಾನಿಗಳು ಆಟದ ಪ್ರದೇಶಕ್ಕೆ ಪ್ರವೇಶಿಸಿದರು ಮತ್ತು ಅವರಲ್ಲಿ ಒಬ್ಬರು ವಿರಾಟ್ ಕೊಹ್ಲಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾದರು ಮತ್ತು ಭದ್ರತಾ ಸಿಬ್ಬಂದಿಯಿಂದ ಹೊರಹಾಕಲ್ಪಟ್ಟರು. ಶ್ರೀಲಂಕಾದ ಎರಡನೇ ಇನ್ನಿಂಗ್ಸ್‌ನ ಆರನೇ ಓವರ್‌ನಲ್ಲಿ ಮೊಹಮ್ಮದ್ ಶಮಿ ಎಸೆತಕ್ಕೆ ಕುಸಾಲ್ ಮೆಂಡಿಸ್ ಅವರು ಚಿಕಿತ್ಸೆ ಪಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಬಗ್ಗೆ ಟೀಂ ಇಂಡಿಯಾ […]

Advertisement

Wordpress Social Share Plugin powered by Ultimatelysocial