ಬಾಲಿವುಡ್ ಹಾಸ್ಯನಟಿ ಸಂಕಷ್ಟ ತಂದ ”ಗಡ್ಡ”:

ಮುಂಬೈ : ಗಡ್ಡಧಾರಿ ವ್ಯಕ್ತಿಗಳನ್ನು ಅಪಹಾಸ್ಯ ಮಾಡಿದ ಹಳೆಯ ವೀಡಿಯೋವೊಂದರ ಕುರಿತಂತೆ ಬಾಲಿವುಡ್ ಹಾಸ್ಯನಟಿ ಭಾರತಿ ಸಿಂಗ್ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಭಾರತಿ ಸಿಂಗ್ ಅವರಿಂದ ಸಿಖ್ಖರ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಪಂಜಾಬ್‍ನ ಅಮೃತಸರದಲ್ಲಿ ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಾಗಿದೆ.

ವೈರಲ್ ಆದ ಹಳೆಯ ವೀಡಿಯೋದಲ್ಲಿ, ಗಡ್ಡ-ಮೀಸೆಯಿಂದ ಅನೇಕ ಪ್ರಯೋಜನಗಳಿವೆ. ಹಾಲು ಕುಡಿಯುವಾಗ ನಿಮ್ಮ ಗಡ್ಡವನ್ನು ನಿಮ್ಮ ಬಾಯಿಯೊಳಗೆ ಹಾಕಿಕೊಳ್ಳಿ.

ಅದು ನಿಮಗೆ ಶಾವಿಗೆ ಪಾಯಸದಷ್ಟೇ ರುಚಿಯನ್ನು ನೀಡುತ್ತದೆ ಎಂದು ಭಾರತಿ ಸಿಂಗ್ ಅಪಹಾಸ್ಯ ಮಾಡಿದ್ದರು. ಈ ವಿಚಾರವಾಗಿ ಸಿಖ್ಖರು ನಮ್ಮ ಧಾರ್ಮಿಕ ನಂಬಿಕೆಯ ಭಾಗವಾದ ಗಡ್ಡದ ಬಗ್ಗೆ ಭಾರತಿ ಸಿಂಗ್ ಅಗೌರವ ತೋರಿಸಿದ್ದಾರೆ ಎಂದು ಆರೋಪಿಸಿ ಸೋಮವಾರ ಅಮೃತಸರದಲ್ಲಿ ಭಾರತಿ ಸಿಂಗ್ ವಿರುದ್ಧ ಸಿಖ್ ಗುಂಪುಗಳು ಪ್ರತಿಭಟನೆ ನಡೆಸಿದ್ದವು. ನಂತರ ಸೋಮವಾರ ಈ ಕುರಿತಂತೆ ವೀಡಿಯೋವೊಂದನ್ನು ಪೋಸ್ಟ್ ಮಾಡಿ ಭಾರತಿ ಸಿಂಗ್ ಅವರು ಕ್ಷಮೆಯಾಚಿಸಿದ್ದಾರೆ ಮತ್ತು ತಾವು ಯಾವುದೇ ಸಮುದಾಯವನ್ನು ನೋಯಿಸುವ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

777 ಚಾರ್ಲಿ ಬಳಿಕ ರಕ್ಷಿತ್ ಶೆಟ್ಟಿ ಕೈಯಲ್ಲಿರುವ ಸಿನಮಾಗಳ್ಯಾವುವು? ಮತ್ತೆ ನಿರ್ದೇಶನ ಯಾವಾಗ?

Wed May 18 , 2022
  ‘777 ಚಾರ್ಲಿ’ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ. ಭಾವನೆಗಳನ್ನು ಇಷ್ಟಪಡುವವರಿಗೆ ಹಾಗೂ ಶ್ವಾನ ಪ್ರಿಯರಿಗೆಂದೇ ಈ ಸಿನಿಮಾ ನಿರ್ಮಾಣ ಆಗಿದೆ. ಇತ್ತೀಚೆಗೆ ಚಿತ್ರ ಟ್ರೈಲರ್ ಕೂಡ ರಿಲೀಸ್ ಆಗಿದ್ದು, ಉತ್ತಮ ರೆಸ್ಪಾನ್ ಸಿಕ್ಕಿದೆ. ಈ ಬೆನ್ನಲೇ ರಕ್ಷಿತ್ ಶೆಟ್ಟಿ ಸಿನಿಮಾ ಬಿಟ್ಟು ತನ್ನ ಮುಂದಿನ ಭವಿಷ್ಯದ ಬಗ್ಗೆ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ‘777 ಚಾರ್ಲಿ’ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, […]

Advertisement

Wordpress Social Share Plugin powered by Ultimatelysocial