ಮುಂಬೈ : ಗಡ್ಡಧಾರಿ ವ್ಯಕ್ತಿಗಳನ್ನು ಅಪಹಾಸ್ಯ ಮಾಡಿದ ಹಳೆಯ ವೀಡಿಯೋವೊಂದರ ಕುರಿತಂತೆ ಬಾಲಿವುಡ್ ಹಾಸ್ಯನಟಿ ಭಾರತಿ ಸಿಂಗ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಭಾರತಿ ಸಿಂಗ್ ಅವರಿಂದ ಸಿಖ್ಖರ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಪಂಜಾಬ್ನ ಅಮೃತಸರದಲ್ಲಿ ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಾಗಿದೆ.
ವೈರಲ್ ಆದ ಹಳೆಯ ವೀಡಿಯೋದಲ್ಲಿ, ಗಡ್ಡ-ಮೀಸೆಯಿಂದ ಅನೇಕ ಪ್ರಯೋಜನಗಳಿವೆ. ಹಾಲು ಕುಡಿಯುವಾಗ ನಿಮ್ಮ ಗಡ್ಡವನ್ನು ನಿಮ್ಮ ಬಾಯಿಯೊಳಗೆ ಹಾಕಿಕೊಳ್ಳಿ.
ಅದು ನಿಮಗೆ ಶಾವಿಗೆ ಪಾಯಸದಷ್ಟೇ ರುಚಿಯನ್ನು ನೀಡುತ್ತದೆ ಎಂದು ಭಾರತಿ ಸಿಂಗ್ ಅಪಹಾಸ್ಯ ಮಾಡಿದ್ದರು. ಈ ವಿಚಾರವಾಗಿ ಸಿಖ್ಖರು ನಮ್ಮ ಧಾರ್ಮಿಕ ನಂಬಿಕೆಯ ಭಾಗವಾದ ಗಡ್ಡದ ಬಗ್ಗೆ ಭಾರತಿ ಸಿಂಗ್ ಅಗೌರವ ತೋರಿಸಿದ್ದಾರೆ ಎಂದು ಆರೋಪಿಸಿ ಸೋಮವಾರ ಅಮೃತಸರದಲ್ಲಿ ಭಾರತಿ ಸಿಂಗ್ ವಿರುದ್ಧ ಸಿಖ್ ಗುಂಪುಗಳು ಪ್ರತಿಭಟನೆ ನಡೆಸಿದ್ದವು. ನಂತರ ಸೋಮವಾರ ಈ ಕುರಿತಂತೆ ವೀಡಿಯೋವೊಂದನ್ನು ಪೋಸ್ಟ್ ಮಾಡಿ ಭಾರತಿ ಸಿಂಗ್ ಅವರು ಕ್ಷಮೆಯಾಚಿಸಿದ್ದಾರೆ ಮತ್ತು ತಾವು ಯಾವುದೇ ಸಮುದಾಯವನ್ನು ನೋಯಿಸುವ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada