ಹಾಸನ, ಜನವರಿ 28: ಹಾಸನದಿಂದ ಮಾಜಿ ಸಚಿವ ಎಚ್ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಮುಂಬರುವ ಕರ್ನಾಟಕ ಚುನಾವಣೆಗೆ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಮತ್ತು ಅದರ ಕುಟುಂಬದಲ್ಲಿ ಗೊಂದಲವಿದೆ ಎನ್ನಲಾಗಿದೆ.
ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವತಃ ಭವಾನಿ ರೇವಣ್ಣ ಅವರೇ ಹಾಸನದಿಂದ ಮುಂದಿನ ವಿಧಾನಸಭಾ ಚುನಾವಣೆಗೆ ಅಭರ್ಥಿ ನಾನೇ ಎಂದು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು.
ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ಆಫರ್ ಕೊಟ್ಟ ರಾಷ್ಟ್ರೀಯ ನಾಯಕ
ಆದರೆ ನಂತರ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಟಿಕೆಟ್ ವಿಚಾರದಲ್ಲಿ ಭವಾನಿ ರೇವಣ್ಣ ಅವರನ್ನು ಕಣಕ್ಕಿಳಿಸುವುದಿಲ್ಲ ಎಂದು ಹೇಳಿರುವುದು ಈಗ ಭವಾನಿ ಅವರ ಬೆಂಬಲಿಗರು ತಮ್ಮ ನಾಯಕಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಜೆಡಿಎಸ್ನ ಶಾಸಕಾಂಗ ಪಕ್ಷದ ನಾಯಕಿ ಹಾಗೂ ದೇವೇಗೌಡರ ಸೊಸೆ ಭವಾನಿ ರೇವಣ್ಣ ಮಣಿಯದೇ ಇರುವುದರಿಂದ ಈ ಸ್ಥಾನ ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಮುಂದುವರಿದ ಬೆಳವಣಿಗೆಯಲ್ಲಿ ಎಚ್ಡಿ ರೇವಣ್ಣ ಹಾಗೂ ಭವಾನಿ ಅವರ ಮಗ ಸೂರಜ್ ರೇವಣ್ಣ ಎಚ್ಡಿ ಕುಮಾರಸ್ವಾಮಿ ಅವರಿಗೆ ಹಾಸನದ ವಿಚಾರದಲ್ಲಿ ತಲೆಹಾಕುವುದು ಬೇಡ. ತಮ್ಮ ತಾಯಿ ಅಭ್ಯರ್ಥಿಯಾದರೆ ಗೆಲುವು ನಿಶ್ಚಿತ ಎಂದು ಎಂದು ಹೇಳಿರುವುದಾಗಿ ವರದಿಯಾಗಿದೆ. ಭವಾನಿ ರೇವಣ್ಣ, ಹಾಸನ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಕುಮಾರಸ್ವಾಮಿ ಅವರ ಹಿರಿಯ ಸಹೋದರ ಮತ್ತು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಪತ್ನಿ.
ವಾನಿ ರೇವಣ್ಣ ಅವರು ಹಾಸನ ಕ್ಷೇತ್ರಕ್ಕೆ ತಮ್ಮ ಹೆಸರನ್ನು ಅಂತಿಮಗೊಳಿಸಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಸಾರ್ವಜನಿಕವಾಗಿ ಹೇಳಿಕೊಂಡ ಎರಡು ದಿನಗಳ ನಂತರ ಕುಮಾರಸ್ವಾಮಿ ಅವರು ಜನವರಿ 25 ರಂದು (ಕ್ಷೇತ್ರದಲ್ಲಿ) ಅವರ ಸ್ಪರ್ಧೆ ಅಗತ್ಯವಿಲ್ಲ ಎಂದು ಹೇಳಿದ್ದರು.
ಏಳು ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಜಯ
ಮೇ ತಿಂಗಳೊಳಗೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ 93 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವ ಜೆಡಿಎಸ್, ಹಾಸನ ಕ್ಷೇತ್ರಕ್ಕೆ ಇನ್ನೂ ಒಬ್ಬರನ್ನು ಅಂತಿಮಗೊಳಿಸಿಲ್ಲ. ಹಾಸನವು ದೇವೇಗೌಡರ ತವರು ಜಿಲ್ಲೆಯಾಗಿದ್ದು, 2018ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಹಾಸನ ಕ್ಷೇತ್ರವನ್ನು ಹೊರತುಪಡಿಸಿ ಏಳು ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಒಂದು ಕ್ಷೇತ್ರದಲ್ಲಿ ಬಿಜೆಪಿಯ ಪ್ರೀತಂ ಗೌಡ ಅವರು ಗಳಿಸಿ ಒಕ್ಕಲಿಗ ಪ್ರಾಬಲ್ಯದಲ್ಲಿ ಕೇಸರಿ ಪಕ್ಷಕ್ಕೆ ಇದು ಮೊದಲ ಜಯವಾಗಿತ್ತು.
ಕ್ಷೇತ್ರದಲ್ಲಿ ಪ್ರವಾಸ ಮುಂದುವರಿಕೆ
ಕುಮಾರಸ್ವಾಮಿ ಹೇಳಿಕೆ ನೀಡಿದರೂ ಪಕ್ಷದ ಮೂಲಗಳ ಪ್ರಕಾರ ಭವಾನಿ ರೇವಣ್ಣ ಹಿಂದೆ ಸರಿಯದೆ ಶುಕ್ರವಾರ ದೇವಸ್ಥಾನದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರಿಂದ ಕ್ಷೇತ್ರದಲ್ಲಿ ಪ್ರವಾಸ ಮುಂದುವರಿಸಿದ್ದಾರೆ. ಹಾಸನ ಅಭ್ಯರ್ಥಿ ವಿಚಾರ ಇದೀಗ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ತಲುಪಿದ್ದು, ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಗೌಡರ ಕುಟುಂಬದೊಳಗಿನ ಬಿಕ್ಕಟ್ಟು
ಈ ಬೆಳವಣಿಗೆಗಳ ಬಗ್ಗೆ ಭವಾನಿ ಅವರ ಪತಿ ಎಚ್ ಡಿ ರೇವಣ್ಣ ಅವರ ಸ್ಪಷ್ಟ ಮೌನವು ಈ ವಿಷಯದ ಬಗ್ಗೆ ಗೌಡರ ಕುಟುಂಬದೊಳಗಿನ ಬಿಕ್ಕಟ್ಟಿನ ಬಗ್ಗೆ ಸ್ವಲ್ಪ ಪ್ರಮಾಣದ ಊಹಾಪೋಹಗಳಿಗೆ ಕಾರಣವಾಗಿದೆ. ರೇವಣ್ಣ ಅವರ ಹಿರಿಯ ಪುತ್ರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ತಾಯಿ ಅಭ್ಯರ್ಥಿ ಎಂದು ಹೇಳಿಕೊಂಡ ಬೆನ್ನಲ್ಲೇ, ದೇವೇಗೌಡರೇ ನಿರ್ಧರಿಸುತ್ತಾರೆ, ಎಲ್ಲರೂ ಪಾಲಿಸುತ್ತಾರೆ ಎಂದು ಸಮರ್ಥಿಸಿಕೊಂಡಿದ್ದರೂ, ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗುವುದಿಲ್ಲ ಎಂಬ ಹೇಳಿಕೆಯ ನಂತರ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
https://play.google.com/store/apps/details?id=com.speed.newskannada