ಯಳಂದೂರು ಪಟ್ಟಣದ ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಭೀಮ ದೀಕ್ಷಾ ಭೂಮಿ ಯಾತ್ರೆ ಸಮಿತಿ ಹಾಗೂ ಬ್ಲಾಕ್ ಅಂಡ್ ವೈಟ್ ಫೌಂಡೇಶನ್ ವತಿಯಿಂದ ಭೀಮ ಕೊರೆಗಾoವ್ ವಿಜಯೋತ್ಸವ ಪ್ರಯುಕ್ತ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ನಡೆಯಿತು…
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಜೇತವನ ಮನೋರಕ್ಕಿತ ಬಂತೇಜಿರವರು ವಹಿಸಿ ಮಾತನಾಡಿದರು…….
ಕಾರ್ಯಕ್ರಮ ಉದ್ಘಾಟನೆಯನ್ನು ಚಾಮರಾಜನಗರ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಾಧಿಶರಾದ ಶ್ರೀಧರ್. ಎಂ ರವರು ನೆರವೇರಿಸಿದರು….
ನಂತರ ಅಂಬೇಡ್ಕರ್ ಹಾಗೂ ಸಾವಿತ್ರಿ ಬಾ ಪುಲೆ ಭಾವಚಿತ್ರಕ್ಕೆ ಪುಷ್ಪರ್ಚಾನೆ ಸಲ್ಲಿಸದರು….
ಕಾರ್ಯಕ್ರಮದಲ್ಲಿ ಬ್ಲಾಕ್ ಅಂಡ್ ವೈಟ್ ಫೌಂಡೇಶನ್ ನ ಅಧ್ಯಕ್ಷರಾದ ಶಾಂತರಾಜು ಕೆಸ್ತೂರು ರವರು ಪ್ರಾಸ್ತವಿಕ ನುಡಿಯನ್ನು ನುಡಿದರು….
ಮುಖ್ಯ ಭಾಷಣಕಾರರಾಗಿ ಆಗಮಿಸಿದ ಪ್ರೊ. ಹ. ರಾ ಮಹೇಶ್ ರವರು ಮಾತನಾಡಿ ಅಂಬೇಡ್ಕರ್ ರವರು ಭಾರತದಲ್ಲಿ ಭೀಮಾ ನದಿ ದಡದಲ್ಲಿರುವ ಕೋರೆಗಾಂವ್ ಯುದ್ಧ ನಡೆದ ಸ್ಥಳವನ್ನು ಪರಿಶೀಲಿಸಿ ಉತ್ಖನನ ಮಾಡಿ ಮಹರ್ ಜನಾಂಗದ ಸೈನಿಕರ ಶೌರ್ಯ ಸ್ಥೂಪವನ್ನು ನಿರ್ಮಿಸಿ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಮಾಡಿದರು.ಇಂದು ನಾವು 205ನೇ ಕೋರೆಗಾಂವ್ ವಿಜಯೋತ್ಸವ ನೆನಪಿಗಾಗಿ ಪ್ರಬಂಧ ಸ್ಪರ್ಧೆ ನಡೆಸಿ ಮಹತ್ವವನ್ನು ತಿಳಿಸಲಾಗಿದೆ ಎಂದರು….
ಗಣ್ಯರು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬುಹುಮಾನ ವಿತರಣೆ ಮಾಡಿದರು….
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada