ಬೀದರ್: ಬ್ರಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಮಾರಾಮಾರಿ ನಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರಾವಗಿದದ್ದು, ಸ್ಥಳದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಇಂತಹ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಫೆರೋಜ್ ಖಾನ್ ಮತ್ತು ಇವರ ಮಕ್ಕಳು ಗಾಯಗೊಂಡಿದ್ದಾರೆ. ಫೆರೋಜ್ ಪುತ್ರ ಮತ್ತು ರೌಫ್ ಎಂಬಾತನ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದಿತ್ತು. ಈ ಸಂಬಂಧ ನಗರದ ಮನಿಯಾರ ತಾಲಿಮ್ನಲ್ಲಿ ಅಬ್ದುಲ್ ರೌಫ್ ಹಾಗೂ ಫೆರೋಜ್ ಪುತ್ರರ ನಡುವೆ ಮಾರಾಮಾರಿ ನಡೆದಿತ್ತು.
ಗಾಯಗೊಂಡ ಫೆರೋಜ್ ಪುತ್ರರನ್ನು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ತುರ್ತು ಚಿಕಿತ್ಸಾ ಘಟಕಕ್ಕೆ ಬಂದ ಯುವಕರ ಗುಂಪು ಫೆರೋಜ್ ಮತ್ತು ಇವರ ಮಕ್ಕಳ ಮೇಲೆ ಖಾರದಪುಡಿ ಎರಚಿ ಆಸ್ಪತ್ರೆಯಲ್ಲಿದ್ದ ಪರಿಕರಗಳಿಂದಲೇ ಹಲ್ಲೆ ಮಾಡಿದೆ. ಈ ವೇಳೆ ಪರಸ್ಪರ ಮಾರಾಮಾರಿ ನಡೆದಿದ್ದು. ಘಟನೆಯಲ್ಲಿ ಗಂಭೀರವಾಗಿ ಅಬ್ದುಲ್ ರೌಫ್ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಫಿರೋಜ್ ಖಾನ್, ಅಫಸರ್ ಖಾನ್, ಅರಬಾಜ್ ಖಾನ್ ಸೇರಿ ಮತ್ತಿತರರು ಗಾಯಗೊಂಡಿದ್ದಾರೆ. ಆಸ್ಪತ್ರೆ ಬಳಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada