ಬಿದ್ದು ಎದ್ದು ಗೆದ್ದ ಕಿರೀಟಿ…ಬಳ್ಳಾರಿ ಕುವರ ಇಂಟ್ರೂಡಕ್ಷನ್ ಟೀಸರ್ ಹಿಂದಿನ ಪರಿಶ್ರಮ ಅನಾವರಣ!

 

 

 

ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಕಿರೀಟಿ ನಟನೆಯ ಮೊದಲ ಸಿನಿಮಾದ ಇಂಟ್ರೂಡಕ್ಷನ್ ಟೀಸರ್ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸ್ತಿದೆ. ಕಿರೀಟಿ ಸ್ಟಂಟ್ಸ್, ಡ್ಯಾನ್ಸ್, ಆಕ್ಷನ್ ಸೀನ್ಸ್ ಕಂಡು ಚಿತ್ರರಸಿಕರು ಹುಬ್ಬೇರಿಸಿದ್ದರು. ಸ್ವತಃ ಚಿತ್ರಬ್ರಹ್ಮ ರಾಜಮೌಳಿಯೇ ಕಿರೀಟಿ ಆಕ್ಟಿಂಗ್ , ಸ್ಟಂಟ್ಸ್ ಗೆ ಬಹುಪರಾಕ್ ಅಂತಾ ಬೆನ್ನುತಟ್ಟಿದ್ದರು. ಇಷ್ಟೆಲ್ಲಾ ಮೆಚ್ಚುಗೆ ಪಡೆದಿರುವ ಕಿರೀಟಿ ಸಾಹಸದ ಹಿಂದೆ ನೋವು, ಕಷ್ಟದ ಪರಿಶ್ರಮ ಅಡಗಿದೆ.ಟೀಸರ್ ಹಿಂದಿನ ಪರಿಶ್ರಮದ ತುಣುಕು ಅನಾವರಣ…ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಇ‌ಂಟ್ರೂಡಕ್ಷನ್ ಬಿಟಿಎಸ್ ಅಂದ್ರೆ ಟೀಸರ್ ಹಿಂದಿನ ಪರಿಶ್ರಮ ಸಣ್ಣದೊಂದು ಝಲಕ್ ನ್ನು ಚಿತ್ರತಂಡ ರಿಲೀಸ್ ಮಾಡಿದೆ. ಆ ವಿಡಿಯೋ ತುಣುಕಿನಲ್ಲಿ ಕಿರೀಟಿ ಪರಿಶ್ರಮ ಎದ್ದು ಕಾಣ್ತಿದೆ. ಬಿದ್ದು, ಎದ್ದು, ಪೆಟ್ಟು ಮಾಡಿಕೊಂಡರು ಛಲ ಬಿಡದೇ ಕಿರೀಟಿ ಸ್ಟಂಟ್ಸ್ ಗಳನ್ನು ಅದ್ಭುತವಾಗಿ ಮಾಡಿದ್ದಾರೆ. ಖ್ಯಾತ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಸಾರಥ್ಯದಲ್ಲಿ ಮೂಡಿ ಬಂದಿರುವ ಸ್ಟಂಟ್ಸ್ ಮೈ ಜುಮ್ ಎನಿಸುತ್ತವೆ.ಅಂದಹಾಗೇ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ನಡಿ ಅದ್ಧೂರಿ ಬಜೆಟ್ ನಲ್ಲಿ ತಯಾರಾಗ್ತಿರುವ 15 ಸಿನಿಮಾ ಇದಾಗಿದ್ದು, ಮಯಾಬಜಾರ್ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ಓಂಕಾರ ಹಾಕಿರುವ, ಬಾಹುಬಲಿ ಛಾಯಾಗ್ರಾಹಕ ಕೆಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ಕೈಚಳಕ ಹಾಗೂ ದೇವಿಶ್ರೀಪ್ರಸಾದ್ ಮ್ಯೂಸಿಕ್ ಪುಳಕ ಹಾಗೂ ರವೀಂದರ್ ಕಲಾ ನಿರ್ದೇಶನ ಕಿರೀಟಿ ಸಿನಿಮಾಗಿದೆ. ಕಿರೀಟಿ ತಂದೆ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಬಣ್ಣ ಹಚ್ಚಿದ್ದು, ಶ್ರೀಲೀಲಾ ನಾಯಕನಾಗಿ ನಟಿಸಿದ್ದು, ಜೆನಿಲಿಯಾ ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಷಡ್ಯಂತ್ರವಿದೆ !

Wed Apr 20 , 2022
ಶಿವಮೊಗ್ಗ : ಶಾಂತವಾಗಿದ್ದ ಕರ್ನಾಟಕದಲ್ಲಿ ಗಲಭೆಗಳನ್ನು ಸೃಷ್ಟಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಷಡ್ಯಂತ್ರವಿದೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆ ಪ್ರಕರಣವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಶಾಂತವಾಗಿದ್ದ ಕರ್ನಾಟಕದಲ್ಲಿ ಗಲಭೆಗಳನ್ನು ಸೃಷ್ಟಿಸುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೂಡ ಮೌಲ್ವಿ ಪಕ್ಕದಲ್ಲೇ ನಿಂತಿದ್ದಾರೆ. ಅಲ್ತಾಫ್ ಹಳ್ಳೂರು ಕಲ್ಲು ಹೊಡೆದಿರುವುದನ್ನು ನೋಡಿದ್ದೇನೆ. ಅಲ್ತಾಫ್ ಹಳ್ಳೂರು ಅವರನ್ನು ಸರ್ಕಾರ ತಕ್ಷಣವೇ […]

Advertisement

Wordpress Social Share Plugin powered by Ultimatelysocial