ಬೀದರ್..ಸುಭಾಸ್ ಚಂದ್ರ ಭೋಸ್ ಯುವಕ ಸಂಘ (ರಿ ) ಔರಾದ್ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿ ಮಾತನಾಡಿದ ಸಂಘದ ಅಧ್ಯಕ್ಷ ರತ್ನದೀಪ ಕಸ್ತೂರೆ
ಬೀದರ್ ಜಿಲ್ಲೆಯ ಔರಾದ ಪಟ್ಟಣದಲ್ಲಿರುವ ಅಂಗನವಾಡಿ,ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಢಶಾಲೆ (ಕನ್ನಡ, ಮರಾಠಿ, ಉರ್ದು ) ಮಾಧ್ಯಮ, ಆದರ್ಶ ವಿದ್ಯಾಲಯ, ಹಾಗೂ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಔರಾದ ಇವೆಲ್ಲವು ಕೂಡಾ ಒಂದೇ ಕಾಂಪೌಂಡ್ ಒಳಗಡೆ ಇವೆ ಸುಮಾರು 10 ದಿವಸಗಳ ನಿರಂತರ ಮಳೆಯಿಂದ ಶಾಲೆ ಆವರಣ ಕೆಸರು ಗಂದ್ದೆಯಂತೆ ಆಗಿದೆ ಕ್ಷೆತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪಕ್ಕದಲ್ಲೇ ಇದೆ ಆದರೂ ಕೂಡಾ ಅವರು ಯಾವದೇ ರೀತಿಯ ಕ್ರಮ ಕೈಗೊಳ್ಳುತಿಲ್ಲಾ, ವಿದ್ಯಾರ್ಥಿಗಳು ಶಾಲೆಗೆ ಬರಲು ಭಯ ಭೀತರಾಗಿದ್ದಾರೆ, 2000 ಸಾವಿರಕ್ಕಿಂತ ಹೆಚ್ಚಿನ ಮಕ್ಕಳು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ,ಸುಮಾರು ಮಕ್ಕಳು ಕಾಲು ಜಾರಿ ಬಿದ್ದಿದ್ದಾರೆ ಪೋಷಕರು ಮಕ್ಕಳಿಗೆ ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ ಅಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ ದಯವಿಟ್ಟು ಜಿಲ್ಲಾಧಿಕಾರಿಗಳು ಇತ್ತ ಗಮನಹರಿಸಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಸುನಿಲ್ ಮಿತ್ರಾ, ರೋಹಿತ್ ಕಾಂಬಳೆ, ವಿದ್ಯಾರ್ಥಿಗಳಾದ ಅಕಾಶ,ಪ್ರಕಾಶ್, ಶಿಲ್ಪಾ, ಪೂಜಾ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: