ರೋಹಿಣಿ ಸಿಂಧೂರಿ, ಡಿ.ರೂಪಗೆ ಬಿಗ್‌ ಶಾಕ್‌.

ಕಳೆದ ಒಂದು ವಾರದಿಂದ ಸುದ್ದಿಯಲ್ಲಿ ಐಎಎಸ್‌ ಅಧಿಕಾರಿ ಮತ್ತು ಡಿಐಜಿ ರೂಪ ಅವರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ರಾಜ್ಯ ಸರ್ಕಾರ ಎಂಟ್ರಿಯಾಗಿದ್ದು, ಇಬ್ಬರ ವಿರುದ್ದ ತನಿಖೆ ನಡೆಸಲು ಆದೇಶ ಹೊರಡಿಸಿದೆ.ಸಿವಿಲ್‌ ಸೇವಾ ನಿಯಮಾವಳಿ ಉಲ್ಲಂಘನೆ, ಭ್ರಷ್ಟಾಚಾರ ಹಾಗೂ ವೈಯಕ್ತಿಕ ವಿಚಾರಗಳಲ್ಲಿ ಆರೋಪ, ಪ್ರತ್ಯಾರೋಪ ಹಿನ್ನೆಲೆಯಲ್ಲಿ ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ದ ತನಿಖೆ ನಡೆಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಆದೇಶವನ್ನು ಹೊರಡಿಸಿದ್ದಾರೆ.ಈ ಹಿಂದೆ ಕೂಡ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು, ಈ ಬಗ್ಗೆ ರೂಪ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದರು, ಇದಲ್ಲದೇ ಇಬ್ಬರು ಕೂಡ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ದೂರಿನ ಬಳಿಕ ಇಬ್ಬರನ್ನು ಕೂಡ ಸ್ಥಳ ನಿಯೋಜನೆ ಮಾಡದೇ ರಾಜ್ಯ ಸರ್ಕಾರ ಎತ್ತಂಗಡಿ ಮಾಡಿತ್ತು, ಇದೇ ವೇಳೆಯಲ್ಲಿ ರೂಪ ಅವರ ಪತಿ ಮೌದ್ಗಿಲ್ ಅವರಿಗೂ ಕೂಡ ಇಬ್ಬರ ಜಗಳಕ್ಕೆ ಬಲಿಯಾಗಿ, ಸದ್ಯ ಅವರು ಕೂಡ ಸ್ಥಳ ನಿಯೋಜನೆ ಮಾಡದೇ ಎತ್ತಂಗಡಿ ಮಾಡಲಾಗಿದೆ. ಸದ್ಯ ರೋಹಿಣಿ ಸಿಂಧೂರಿ ವಿರುದ್ದ ಮಾನಹಾನಿ ಸುದ್ದಿಯನ್ನು ಪ್ರಕಟ ಮಾಡದಂತೆ ಸಿಟಿ ಸಿವಿಲ್‌ ಕೋರ್ಟ್ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಆಸ್ತಿ ಆಸೆಗೆ ಒಂದೇ ಮನೆಯ ನಾಲ್ವರ ಕೊಲೆ;

Sat Feb 25 , 2023
ಒಂದೇ ಮನೆಯ ನಾಲ್ವರ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಹೊರಬಿದ್ದಿದ್ದು, ಕೊಲೆಗೆ ಆಸ್ತಿ ಆಸೆಯೇ ಕಾರಣ ಎನ್ನಲಾಗಿದೆ. ಮಾತ್ರವಲ್ಲ, ಕೊಲೆಯ ವೇಳೆ ನಾಲ್ಕು ವರ್ಷದ ಮಗು ಮಲಗಿದ್ದರಿಂದ ಹಾಗೂ ಇನ್ನೊಂದು ಮಗು ಪಕ್ಕದ ಮನೆಯಲ್ಲಿ ಆಟವಾಡುತ್ತಿದ್ದುದರಿಂದ ಬಚಾವ್ ಆದಂತಾಗಿದೆ.ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಈ ಕೊಲೆ ನಡೆದಿದೆ. ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ […]

Advertisement

Wordpress Social Share Plugin powered by Ultimatelysocial