ಭೀಕರ ಕಾರು ಅಪಘಾತದಲ್ಲಿ ಸಂಸದರ 22 ವರ್ಷದ ಪುತ್ರ ದುರಂತ ಸಾವು

ಚೆನ್ನೈ: ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ರಾಜ್ಯಸಭಾ ಸದಸ್ಯ ಎನ್​​.ಆರ್​. ಇಳಂಗೋವನ್ ಅವರ ಪುತ್ರ ರಾಕೇಶ್​ (22) ಗುರುವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.

ಸಂಸದರ ಪುತ್ರ ಪುದುಚೇರಿಯಿಂದ ಚೆನ್ನೈಗೆ ಹೆಚ್ಚು ಪ್ರಯಾಣಿಕರೊಂದಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು.

ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತದ ಸಂಭವಿಸಿದೆ. ರಾಕೇಶ್​ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಪ್ರಯಾಣಿಕ ಗಂಭೀರವಾರ ಗಾಯಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರಾಕೇಶ್​ ಮೃತದೇಹವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಾಜಿ ಹಿರಿಯ ವಕೀಲರಾದ ಎನ್‌ಆರ್ ಇಳಂಗೋವನ್ ಅವರು 2020 ರಲ್ಲಿ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾದರು. ಇದು ಅವರ ಮೊದಲ ಅವಧಿಯಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇನ್ನು ಮುಂದೆ ತಾಜ್‌ವೆಸ್ಟೆಂಡ್‌ನ‌ಲ್ಲಿ ಇರೋದಿಲ್ಲ: ಎಚ್‌ಡಿಕೆ

Thu Mar 10 , 2022
  ವಿಧಾನಸಭೆ: ನಾನು ಇನ್ನು ಮುಂದೆ ತಾಜ್‌ ವೆಸ್ಟೆಂಡ್‌ನ‌ಲ್ಲಿ ವಾಸ ಮಾಡುವುದಿಲ್ಲ. ಇನ್ನು ಮುಂದೆ ಏನಿದ್ದರೂ, ಕರ್ಮ ಭೂಮಿ ರಾಮನಗರದ ಕೇತಗಾನಹಳ್ಳಿಯಲ್ಲಿ ವಾಸ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈಗಲ್ಟನ್‌ ರೆಸಾರ್ಟ್‌ ಅಕ್ರಮವಾಗಿ ಸ್ಥಾಪಿಸಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ವಿಚಾರದಲ್ಲಿ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ಹೇಳಿದ ಅವರು, ನಾನು ಯಾರ ಪರವಾಗಿಯೂ ಇಲ್ಲ ವಾಸ್ತವದ […]

Advertisement

Wordpress Social Share Plugin powered by Ultimatelysocial