ಬ್ರೇಕ್ ಪೆಡಲ್​ಗೆ ನೀರಿನ ಬಾಟಲಿ ಸಿಕ್ಕಿಕೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಯದ್ವಾತದ್ವಾ ̤

ಮಂಗಳೂರು: ಬ್ರೇಕ್ ಪೆಡಲ್​ಗೆ ನೀರಿನ ಬಾಟಲಿ ಸಿಕ್ಕಿಕೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಯದ್ವಾತದ್ವಾ ಚಲಿಸಿ ದ್ವಿಚಕ್ರ ವಾಹನ ಮತ್ತು 2 ಕಾರುಗಳಿಗೆ ಡಿಕ್ಕಿ ಹೊಡೆದಿದೆ.ಈ ಘಟನೆ ಮಂಗಳೂರು ನಗರದ ಉರ್ವಾದ ಚಿಲಿಂಬಿ-ಕೋಟೆಕಣಿ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.ವಿವೇಕಾನಂದ ಶೆಣೈ ಎಂಬುವವರು ಕೋಟೆಕಣಿಯಿಂದ ಕಾರು ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಕಾರಿನಲ್ಲಿದ್ದ ವಾಟರ್​ ಬಾಟಲಿ ಕಾರಿನ ಬ್ರೇಕ್ ಪೆಡಲ್ ಅಡಿ ಸಿಲುಕಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಯರ್ರಾಬಿರ್ರಿ ಚಲಿಸಿದೆ. ಪರಿಣಾಮ 2 ದ್ವಿಚಕ್ರ ವಾಹನ ಹಾಗೂ 2 ಕಾರುಗಳಿಗೆ ಡಿಕ್ಕಿ ಹೊಡೆದು ನಿಂತಿದೆ.ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನ ಸವಾರನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 2 ಕಾರು ಮತ್ತು 2 ದ್ಬಿಚಕ್ರ ವಾಹನ ಜಖಂ ಆಗಿವೆ.ಕಾರು ಚಾಲಕ ವಿವೇಕಾನಂದ ಶೆಣೈ ವಿರುದ್ಧ ಬಂದರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಕ್ಸಲ್ ನಿಗ್ರಹ ದಳ ಸಿಬ್ಬಂದಿಗಳಿಗೆ ವಿಶೇಷ ಆಹಾರ ಭತ್ಯೆ ಹೆಚ್ಚಿಸಿ ಎಂದು ಆದೇಶ ಹೊರಡಿಸಿದ್ದರು.

Fri Feb 4 , 2022
ಬೆಂಗಳೂರು: ನಕ್ಸಲ್ ನಿಗ್ರಹ ದಳ (ಎಎನ್ ಎಫ್) ಯೋಧರು ಹಾಗೂ ಆಂತರಿಕ ಭದ್ರತಾ ವಿಭಾಗ ದಲ್ಲಿ ಪ್ರಶಿಕ್ಷಣಾರ್ಥಿಗಳಾಗಿ, ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ, ನೀಡಲಾಗುತ್ತಿರುವ ವಿಶೇಷ ಆಹಾರ ಭತ್ಯೆ ದರವನ್ನು, ರೂಪಾಯಿ 130 ರಿಂದ 300 ರೂ ಗಳಿಗೆ ಹೆಚ್ಚಿಸಿ, ಸರಕಾರ ಆದೇಶ ಹೊರಡಿಸಿದೆ.ಈ ಸಂಬಂಧ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಆಂತರಿಕ ಭದ್ರತಾ ವಿಭಾಗ, ಸರಕಾರಕ್ಕೆ ಸಲ್ಲಿಸಿದ್ದ ಕೋರಿಕೆಯನ್ನು ಪುರಸ್ಕರಿಸಿ, ವಿಶೇಷ ಆಹಾರ ಭತ್ಯೆಯನ್ನು ಪರಿಷ್ಕರಿಸಲಾಗಿದೆ.ವಿಶೇಷ ಆಹಾರ ಹೆಚ್ಚುವರಿ […]

Advertisement

Wordpress Social Share Plugin powered by Ultimatelysocial