ಬೈಕ್‌-ಕಾರು ನಡುವೆ ಅಪಘಾತ; ಮಾಜಿ ಸೈನಿಕ ಸ್ಥಳದಲ್ಲೇ ಸಾವು

ಇಲ್ಲಿನ ಅಮ್ಮಿನಬಾವಿ ಬಳಿ ಬೈಕ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಮಾಜಿ ಸೈನಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಲಪ್ಪ ಇದ್ಲಿ ಮೃತಪಟ್ಟ ಮಾಜಿ ಯೋಧ.ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಂದಿಹಾಳ ಕ್ರಾಸ್ ಬಳಿ ಶನಿವಾರ ಬೈಕ್‌ಗೆ ಕಾರು ಡಿಕ್ಕಿಯಾಗಿ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ‌ ಚನ್ನೂರ ಗ್ರಾಮದ ಬಿ.ಎಸ್.ಪಾಟೀಲ್ (59) ಮೃತ ವ್ಯಕ್ತಿ. ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ಬೈಕ್‌ಗೆ ಗುದ್ದಿ, ನಂತರ ರಸ್ತೆ ಬದಿಯ ಗೋಡೆಗೆ ಡಿಕ್ಕಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇನ್ನುಳಿದ ಮೂವರು ಹಾಗೂ ಬೈಕ್‌ ಸವಾರ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾತ್ರಿ ಪಾರ್ಟಿ ಮಾಡಿ ಗುಡಿಸಲಲ್ಲಿ ಮಲಗಿದ್ದಾಗ ಬೆಂಕಿ ಅವಘಡ

Sat Dec 31 , 2022
  ಗುಡಿಸಲಿನಲ್ಲಿ ರಾತ್ರಿ ಪಾರ್ಟಿ ಮಾಡಿ ಮದ್ಯದ ಅಮಲಿನಲ್ಲಿ ಮಲಗಿದ್ದ ವೇಳೆ ಆಕಸ್ಮಿಕ ಬೆಂಕಿ (Fire Accident‌) ತಗುಲಿ ಒಬ್ಬ ವ್ಯಕ್ತಿ ಸಜೀವ ದಹನವಾಗಿದ್ದರೆ, ಮತ್ತೊಬ್ಬರು ಸಣ್ಣಪುಟ್ಟ ಸುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿರುವ ಘಟನೆ ಭಾಲ್ಕಿ ತಾಲೂಕಿನ ಹರನಾಳ ಗ್ರಾಮದ ಜಮೀನಿನಲ್ಲಿ ನಡೆದಿದೆ.60 ವರ್ಷ ಜಗನಾಥ ಹಲಗೆ ಸಜೀವ ದಹನಕ್ಕೆ ಒಳಗಾದ ವ್ಯಕ್ತಿ. ಜಗನಾಥ ಹಲಗೆ ಹಾಗೂ ಮಾರುತಿ ಗೊರನೆ ಎಂಬ ಇಬ್ಬರು ತಡ ರಾತ್ರಿ ಗುಡಿಸಲಿನಲ್ಲಿ ಪಾರ್ಟಿ ಮಾಡಿದ್ದರು. […]

Advertisement

Wordpress Social Share Plugin powered by Ultimatelysocial