ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಅರಳಿಹಳ್ಳಿ ಬಳಿ ಶುಕ್ರವಾರ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಶಶಿ (24) ಮೃತ ಯುವಕ. ಗಾಯಾಳುಗಳನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಖಾಸಗಿ ವಾಹನದಲ್ಲಿ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಂದಿಹಾಳ ಕ್ರಾಸ್ ಬಳಿ ಶನಿವಾರ ಬೈಕ್ಗೆ ಕಾರು ಡಿಕ್ಕಿಯಾಗಿ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಚನ್ನೂರ ಗ್ರಾಮದ ಬಿ.ಎಸ್.ಪಾಟೀಲ್ (59) ಮೃತ ವ್ಯಕ್ತಿ. ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ಬೈಕ್ಗೆ ಗುದ್ದಿ, ನಂತರ ರಸ್ತೆ ಬದಿಯ ಗೋಡೆಗೆ ಡಿಕ್ಕಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇನ್ನುಳಿದ ಮೂವರು ಹಾಗೂ ಬೈಕ್ ಸವಾರ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada