ಜ.22ರಂದು KSRTC ಚಾಲಕನಿಗೆ ಚಾಕು ಇರಿದು ಪರಾರಿಯಾಗಿದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದಂತ ವೇಳೆಯಲ್ಲಿ, ಪರಾರಿಯಾಗಲು ಯತ್ನಿಸಿ ಪೊಲೀಸರ ಗುಂಡೇಟಿಗೆ ನರಳಿದ್ದಾರೆ. ಆರೋಪಿಗಾಗಿ ಬಲೆ ಬಿಸಿದ್ದ ಬಿಳಿಕೆರೆ ಠಾಣೆ ಪೊಲೀಸರು ಆರೋಪಿಗಳ ಇರುವ ಖಚಿತ ಮಾಹಿತಿಯನ್ನು ಪಡೆದು ಜಯಂತ್, ವಿಘ್ನೇಶ್ ಹಾಗೂ ದೀಪಕ್ ಬಂಧಿಸಿ ಕರೆದೊಯ್ಯುತ್ತಿದ್ದರು. ಹುಣಸೂರು ತಾಲೂಕಿನ ಹಂದನಹಳ್ಳಿ ಗೇಟ್ ಬಳಿ ಕರೆದೊಯ್ಯುತ್ತಿದ್ದಂತ ವೇಳೆಯಲ್ಲಿ ಆರೋಪಿ ಜಯಂತ್, ಹೆಡ್ ಕಾನ್ಸ್ ಟೇಬಲ್ ರವಿ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್ಐ ಜಯಪ್ರಕಾಶ್ ಆರೋಪಿ ಜಯಂತ್ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ.
ಇದನ್ನೂ ಓದಿ:ಉಂಡ ಮನೆಗೆ ಕನ್ನ ಹಾಕಿದ ಖದೀಮರು.!