ಬಿಜೆಪಿಯ ಶಾಸಕರಲ್ಲಿಯೇ ಕೆಸರು ಎರಚಾಟ ಆರಂಭವಾಗಿದೆ.

ಶಾಸಕ ತಿಪ್ಪಾರಡ್ಡಿ ಅಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಡೀ ರಾಜ್ಯಕ್ಕೆ ಬಿಜೆಪಿ ಸಂಸ್ಕೃತಿ ಏನು ಗೊತ್ತಾಗಿದೆ. 40 ಫರ್ಸೆಂಟ್ ಸರ್ಕಾರವೋ 50 ಫರ್ಸೆಂಟ್ ಸರ್ಕಾರವೋ ಅವರ ಅವರಲ್ಲಿಯೇ ಆರೋಪ ಪ್ರತ್ಯಾರೋಪ ಮಾಡಲಾಗುತ್ತಿದೆಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಅವರು, ನಾವು ಚರ್ಚೆ ಮಾಡಿ ಏನು ಪ್ರಯೋಜನವಿಲ್ಲ.
ಬಿಜೆಪಿಯ ನಾಯಕರು ಶಾಸಕರಲ್ಲಿಯೇ ಕೆಸರ ಎರಚಾಟ ಆರಂಭವಾಗಿದೆ. ಇದರಿಂದ ಜನರು ಬೇಸತ್ತು ಹೋಗಿದ್ದಾರೆ. ಜನರು ಬಿಜೆಪಿಯನ್ನ ಹೊರಗೆ ಕಳಸುತ್ತಾರೆ ಎಂದರು.ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ತನಿಖೆ ಹಿನ್ನೆಲೆ, ಯಾವ ರೀತಿ ತನಿಖೆ ಮಾಡತಾರೆ, ಏನೆಲ್ಲಾ ತನಿಖೆ ಮಾಡತಾರೆ ನೋಡೋಣ. ತನಿಖೆಯಿಂದ‌ ಏನೆಲ್ಲಾ ಸತ್ಯಾಂಶ ಹೊರಬರುತ್ತೆ ನೋಡೋಣ ಎಂದರು. ಇಂದಿನಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಿಂದ ಪಂಚರತ್ನ ಯಾತ್ರೆ ಆರಂಭ ಆಗುತ್ತದೆ. ಫೆಬ್ರವರಿ 2 ರವರೆಗೆ ವಿಜಯಪುರ, ರಾಯಚೂರು ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ಮುಂದಿನ 15 ದಿನಗಳ ಕಾಲ ಪಂಚರತ್ನ ಯಾತ್ರೆ. ನಂತರ ನಾಲ್ಕನೇ ಹಂತರ ಪಂಚರತ್ನ ಯಾತ್ರೆ ಕಿತ್ತೂರು ಕರ್ನಾಟಕದಲ್ಲಿ ನಡೆಯುತ್ತೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರೌಡಿಸಂ ಸಿನಿಮಾಗಳಿಗೆ ಹೆಚ್ಚು ಪ್ರಚಾರ ನೀಡಲಾಗಿದೆ.

Tue Jan 17 , 2023
”ಸಂಸ್ಕಾರ’ , ‘ಸ್ಕೂಲ್ ಮಾಸ್ಟರ್ ‘ ರೀತಿಯ ಚಿತ್ರಗಳನ್ನು ಸರಿಯಾಗಿ ಬಿಂಬಿಸುವ ಕೆಲಸ ಆಗಿಲ್ಲ. ರೌಡಿಸಂ ಮಾದರಿಯ ಸಿನಿಮಾಗಳನ್ನು‌ ಹೆಚ್ಚು ಹೆಚ್ಚು ಪ್ರೊಜೆಕ್ಟ್ ಮಾಡಿ ರಾಜ್ಯದ ಹೊರಗೂ ಕನ್ನಡ ಚಿತ್ರಗಳ ಕುರಿತಂತೆ ನಾವೇ ತಪ್ಪು ಕಲ್ಪನೆ ಮೂಡಿಸಿದ್ದೇವೆ, ಅದನ್ನು ಹೋಗಲಾಡಿಸುವ ಅಗತ್ಯವಿದೆ’ ಎಂದು ನಿರ್ದೇಶಕ ಗಿರೀಶ್ ಕಾಸರವಳ್ಳಿ ಹೇಳಿದರು. ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡದ ಒಟ್ಟು ಸಿನಿಮಾ ಬೆಳವಣಿಗೆ, ಇತಿಹಾಸವನ್ನು ರಾಷ್ಟ್ರೀಯ ನೆಲೆಯಲ್ಲಿ […]

Advertisement

Wordpress Social Share Plugin powered by Ultimatelysocial