ಶಾಸಕ ತಿಪ್ಪಾರಡ್ಡಿ ಅಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಡೀ ರಾಜ್ಯಕ್ಕೆ ಬಿಜೆಪಿ ಸಂಸ್ಕೃತಿ ಏನು ಗೊತ್ತಾಗಿದೆ. 40 ಫರ್ಸೆಂಟ್ ಸರ್ಕಾರವೋ 50 ಫರ್ಸೆಂಟ್ ಸರ್ಕಾರವೋ ಅವರ ಅವರಲ್ಲಿಯೇ ಆರೋಪ ಪ್ರತ್ಯಾರೋಪ ಮಾಡಲಾಗುತ್ತಿದೆಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಅವರು, ನಾವು ಚರ್ಚೆ ಮಾಡಿ ಏನು ಪ್ರಯೋಜನವಿಲ್ಲ.
ಬಿಜೆಪಿಯ ನಾಯಕರು ಶಾಸಕರಲ್ಲಿಯೇ ಕೆಸರ ಎರಚಾಟ ಆರಂಭವಾಗಿದೆ. ಇದರಿಂದ ಜನರು ಬೇಸತ್ತು ಹೋಗಿದ್ದಾರೆ. ಜನರು ಬಿಜೆಪಿಯನ್ನ ಹೊರಗೆ ಕಳಸುತ್ತಾರೆ ಎಂದರು.ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ತನಿಖೆ ಹಿನ್ನೆಲೆ, ಯಾವ ರೀತಿ ತನಿಖೆ ಮಾಡತಾರೆ, ಏನೆಲ್ಲಾ ತನಿಖೆ ಮಾಡತಾರೆ ನೋಡೋಣ. ತನಿಖೆಯಿಂದ ಏನೆಲ್ಲಾ ಸತ್ಯಾಂಶ ಹೊರಬರುತ್ತೆ ನೋಡೋಣ ಎಂದರು. ಇಂದಿನಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಿಂದ ಪಂಚರತ್ನ ಯಾತ್ರೆ ಆರಂಭ ಆಗುತ್ತದೆ. ಫೆಬ್ರವರಿ 2 ರವರೆಗೆ ವಿಜಯಪುರ, ರಾಯಚೂರು ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ಮುಂದಿನ 15 ದಿನಗಳ ಕಾಲ ಪಂಚರತ್ನ ಯಾತ್ರೆ. ನಂತರ ನಾಲ್ಕನೇ ಹಂತರ ಪಂಚರತ್ನ ಯಾತ್ರೆ ಕಿತ್ತೂರು ಕರ್ನಾಟಕದಲ್ಲಿ ನಡೆಯುತ್ತೆ ಎಂದರು.
https://play.google.com/store/apps/details?id=com.speed.newskannada