ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಯಾವುದೇ ನೋಟಿಸ್ ಬಂದಿಲ್ಲ.
ಅವರೇ ನಿನ್ನೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಒಂದು ವೇಳೆ ನೋಟಿಸ್ ನೀಡಿದ್ರೆ ಅವರ ಪರ ಸಮುದಾಯ ನಿಲ್ಲುತ್ತೆ. ರಾಜಕೀಯ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನೋಟಿಸ್ ಕೊಟ್ಟರೆ ಉಳದವರು ಭಯಪಡ್ತಾರೆ ಅಂದುಕೊಂಡಿದ್ದಾರೆ. ನಾವೆಲ್ಲರೂ ಯತ್ನಾಳ್ ಪರವಾಗಿ ನಿಲುತ್ತೇವೆ ಎಂದು ಹೇಳಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗಾಗಿ 2 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಇಂದು ಅಮಿತ್ ಶಾ , ಪ್ರಧಾನಿ ಮೋದಿ, ನಡ್ಡಾಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ. ತಿಂಗಳಾಂತ್ಯಕ್ಕೆ ಹುಬ್ಬಳ್ಳಿ ಅಥವಾ ಶಿಕಾರಿಪುರದಲ್ಲಿ ಶಕ್ತಿಪ್ರದರ್ಶನ ಮಾಡುತ್ತೇವೆ ಎಂದರು.
https://play.google.com/store/apps/details?id=com.speed.newskannada