ಬಿಜೆಪಿ ಕಾರ್ಯಕರ್ತರ ಜೊತೆಗೆ ಬೂತ್ ಮಟ್ಟದಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಕೈಜೋಡಿಸಿದ ಭಾಲ್ಕಿ ಬಿಜೆಪಿ ಯುವ ಮುಖಂಡರಾದ ಪ್ರಸನ್ನ ಖಂಡ್ರೆ.ಭಾಲ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಜನಾಳ, ಕೋಟಗ್ಯಾಳ, ಗೋರನಾಳ, ಗ್ರಾಮಗಳಲ್ಲಿ ಬಿಜೆಪಿ ತಾಲೂಕಾ ಘಟಕದಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ಅಭಿಯಾನದಲ್ಲಿಭಾಗವಹಿಸಿದರು. ಕಾರ್ಯಕರ್ತರೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ಮನೆ-ಮನೆಗೆ ಭೇಟಿ ನೀಡಿ ಕರಪತ್ರಗಳನ್ನು ವಿತರಿಸಿದರು. ಸ್ವತಃ ಕೈಯಲ್ಲಿ ಬ್ರಷ್ ಹಿಡಿದು “ಬಿಜೆಪಿಯೇ ಭರವಸೆ ಮತ್ತೊಮ್ಮೆ ಬಿಜೆಪಿ” ಎಂಬ ಗೋಡೆ ಬರಹವನ್ನು ಬರೆದು ಗಮನ ಸೆಳೆದರು.ಭಾರತೀಯ ಜನತಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಜನವರಿ 29ರಿಂದ ವಿಜಯ ಸಂಕಲ್ಪ ಅಭಿಯಾನ ಪ್ರಾರಂಭವಾಗಿದ್ದು. ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದಲ್ಲಿ ಸದಸ್ಯರನ್ನು ನೋಂದಾಯಿಸಬೇಕು ಎಂದು ಹೇಳಿದರು.ಎಲ್ಲಾ ಬೂತಗಳಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಕಮಲದ ಹೂವು ಗೋಡೆಗಳ ಮೇಲೆ ಮೂಡಿಸುವ ಮೂಲಕ ʻಬಿಜೆಪಿಯೇ ಭರವಸೆ, ಮತ್ತೊಮ್ಮೆ ಬಿಜೆಪಿ’ ಈ ಘೋಷವಾಕ್ಯದೊಂದಿಗೆ ನಡೆಯಲಿರುವ ಈ ಅಭಿಯಾನದ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದು ಕಾರ್ಯಕರ್ತರಲ್ಲಿ ಕೋರಿದರು. ಕ್ಷೇತ್ರದಲ್ಲಿ 15 ವರ್ಷಗಳಿಂದ ನಡೆಯುತ್ತಿರುವ ಕಾಂಗ್ರೆಸ್ ಶಾಸಕರ ದುರಾಡಳಿತದಿಂದ ಕ್ಷೇತ್ರದ ಮತದಾರರು ಬೇಸತ್ತು ಹೋಗಿದ್ದಾರೆ ಹೀಗಾಗಿ ಮುಂಬರುವ ದಿನಗಳಲ್ಲಿ ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ಎಂದು ಹೇಳಿದರು ಈ ಸಂದರ್ಭದಲ್ಲಿ ತಾಲೂಕಿನ ಬಿಜೆಪಿ ಯುವ ಮುಖಂಡರಾದ ಜೈರಾಜ ಕೊಳ್ಳಾ ಸೇರಿದಂತೆ ಗ್ರಾಮದ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada