ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ.
ಪ್ಲೇಕ್ಸ್ನಲ್ಲಿ ಅವರವರ ಅಭಿಮಾನಕ್ಕೆ ಫೋಟೋ ಹಾಕ್ತಾರೆ.
ಅದಕ್ಕೂ ನನಗೂ ಸಂಬಂಧವಿಲ್ಲ.
ಸಚ್ಚಿದಾನಂದಗೆ ನನ್ನ ಬೆಂಬಲ ಇದೆ ಎನ್ನುವುದು ಸೀಕ್ರೆಟ್ ಇಲ್ಲ.
ಸಚ್ಚಿದಾನಂದಗೆ ನನ್ನ ಬೆಂಬಲ ಇದೆ ಎಂದು ಓಪನ್ ಆಗಿ ಘೋಷಣೆ ಮಾಡಿದ್ದೇನೆ.
ಹೀಗಾಗಿ ಸಚ್ಚಿ ಬ್ಯಾನರ್ನಲ್ಲಿ ನನ್ನ ಫೋಟೋ ಹಾಕೊಂಡಿದ್ದಾರೆ.
ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಿಕೊಂಡರೆ ನಾನು ಏನು ಮಾಡೋಕೆ ಆಗಲ್ಲ.
ಸುಮಲತಾ ಸ್ವಾಭಿಮಾನಿ ಪಡೆ ಅಥವಾ ಹೊಸ ಪಕ್ಷ ಕಟ್ಟುತ್ತಾರೆ ಎಂಬ ವಿಚಾರ.
ನಾನು ಯಾವುದೇ ಪಕ್ಷ ಕಟ್ಟುವ ಯೋಚನೆಯನ್ನು ಮಾಡಿಲ್ಲ.
ಅಷ್ಟು ಶಕ್ತಿ ದೇವರು ನನಗೆ ಕೊಡಲಿ ನೋಡೋಣಾ.
ಪಕ್ಷ ಸೇರ್ಪಡೆಯ ಬಗ್ಗೆ ನಾನು ಯಾವುದೇ ಸಭೆ ಮಾಡುತ್ತಿಲ್ಲ.
ನಾನು ಹೋದ ಕಡೆ ಜನರನ್ನು ಪಕ್ಷ ಸೇರ್ಪಡೆ ಬಗ್ಗೆ ಕೇಳ್ತಾ ಇದೀನಿ, ಅವರು ಕೇಳ್ತಾ ಇದಾರೆ.
ಜನರು ಸದ್ಯ ಸ್ವತಂತ್ರವಾಗಿರಿ ಎಂದು ಹೇಳಿದ್ದಾರೆ.
ನಾನು ಯಾವುದೇ ನಿರ್ಧಾರ ಮಾಡಲ್ಲ, ಜನರು ಪಕ್ಷ ಸೇರ್ಪಡೆ ಬಗ್ಗೆ ಹೇಳ್ತಾರೆ.
ಪಕ್ಷಕ್ಕೆ ಸೇರುವ ಪರಿಸ್ಥಿತಿ ಬಂದಾಗ ಹೇಗೆ ಮಾಡಬೇಕೆಂದು ಯೋಚನೆ ಮಾಡ್ತೀನಿ.
ಸುಮಲತಾ ಹೀಗಾಗಲೇ ಬಿಜೆಪಿಗೆ ಮಾನಸಿಕವಾಗಿ ಸೇರ್ಪಡೆಯಾಗಿದ್ದಾರೆ ಎಂಬ ಸಿಪಿವೈ ಹೇಳಿಕೆ ವಿಚಾರ.
ಯೋಗೇಶ್ವರ್ ಅವರಿಗೆ ಬಿಜೆಪಿಗೆ ನಾನು ಬರಬೇಕು ಎಂಬ ಆಸೆ ಇದೆ.
ಅದೇ ರೀತಿ ಹಲವು ನಾಯಕರು ನನ್ನನ್ನು ಮಾತಾಡಿಸಿದ್ದಾರೆ.
ಇಲ್ಲಿಯವರೆಗೆ ನಾನು ಆ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada