ಬಿಜೆಪಿ ಸೇರ್ಪಡೆ ಗುಟ್ಟು ಬಿಚ್ಚಿಟ್ಟ ಸಂಸದೆ ಸುಮಲತಾ

ಮಂಡ್ಯ : ಬಿಜೆಪಿ ಸೇರ್ಪಡೆ ಕುರಿತು ಸಂಸದೆ ಸುಮಲತಾ ಜೊತೆ ಪಕ್ಷದ ವರಿಷ್ಠರು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಈ ಕುರಿತು ಸಂಸದೆ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದಾರೆ.ಮಂಡ್ಯದಲ್ಲಿ ಮಾತನಾಡಿದ ಅವರು ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ಯೋಚನೆ ಮಾಡಿಲ್ಲ. ಬಿಜೆಪಿ ನಾಯಕರು ಸಹ ಈ ಬಗ್ಗೆ ಮಾತನಾಡಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆ ಇಲ್ಲ , ಫ್ಲೆಕ್ಸ್ ನಲ್ಲಿ ನನ್ನ ಮೇಲಿರುವ ಅಭಿಮಾನಕ್ಕೆ ಫೋಟೋ ಹಾಕಿದ್ದಾರೆ ಅಷ್ಟೇ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ಸೇರ್ಪಡೆ ವದಂತಿಗೆ ತೆರೆ ಎಳೆದಿದ್ದಾರೆ.ಪಕ್ಷಕ್ಕೆ ಸೇರುವ ಪರಿಸ್ಥಿತಿ ಬಂದಾಗ ಹೇಗೆ ಮಾಡಬೇಕೆಂದು ಯೋಚನೆ ಮಾಡ್ತೀನಿ. ಯೋಗೇಶ್ವರ್ ಅವರಿಗೆ ಬಿಜೆಪಿಗೆ ನಾನು ಬರಬೇಕು ಎಂಬ ಆಸೆ ಇದೆ ಅದೇ ರೀತಿ ಹಲವು ನಾಯಕರು ನನ್ನನ್ನು ಮಾತಾಡಿಸಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.ಸುಮಲತಾ ಮಾನಸಿಕವಾಗಿ ಬಿಜೆಪಿ ಜೊತೆಗೆ ಇದ್ದಾರೆ ಅನ್ನಿಸುತ್ತಿದೆ, ಹಳೇ ಮೈಸೂರು ಭಾಗದ ಹಲವು ಮುಖಂಡರು ಬಿಜೆಪಿ ಸೇರ್ತಾರೆ ಎಂದು ಎಂದು ಬಿಜೆಪಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಹೇಳಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಪ್ಯಾಕು ಪ್ಯಾಕು’ ಹಿತೇಶ್ ಕಾಪಿನಡ್ಕ

Fri Jan 6 , 2023
‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಭಾಗವಹಿಸಿ ವೀಕ್ಷಕರ ಮನಗೆದ್ದಿದ್ದವರು ಹಿತೇಶ್ ಕುಮಾರ್ ಕಾಪಿನಡ್ಕ  ‘ಪ್ಯಾಕು.. ಪ್ಯಾಕು..’ ಎನ್ನುತ್ತಾ ವೀಕ್ಷಕರನ್ನ ನಗೆಗಡಲಲ್ಲಿ ತೇಲಿಸಿದವರು ಹಿತೇಶ್ ಕುಮಾರ್ ಕಾಪಿನಡ್ಕ. ಕರಾವಳಿಯ ಪ್ರತಿಭೆ ಹಿತೇಶ್ ಕುಮಾರ್ ಕಾಪಿನಡ್ಕ ಇದೀಗ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಪ್ರೀತಿಸಿದ ಹುಡುಗಿಯ ಜೊತೆ ಹಿತೇಶ್ ಕುಮಾರ್ ಕಾಪಿನಡ್ಕ ಹಸೆಮಣೆ ಏರಿದ್ದಾರೆ.ಹಿತೇಶ್ ಕುಮಾರ್ ಕಾಪಿನಡ್ಕ ಹಾಗೂ ಸ್ವಾತಿ ಅವರ ವಿವಾಹ ಮಹೋತ್ಸವ ಜರುಗಿದೆ. ಅದ್ಧೂರಿಯಾಗಿ, ಅಷ್ಟೇ ಸಾಂಪ್ರದಾಯಿಕವಾಗಿ ಹಿತೇಶ್ ಕುಮಾರ್ ಕಾಪಿನಡ್ಕ ಹಾಗೂ […]

Advertisement

Wordpress Social Share Plugin powered by Ultimatelysocial