ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುವ ಬಿಜೆಪಿ ಅಭ್ಯರ್ಥಿಗಳು!

ಕೋಲಾರ: ರಾಜ್ಯ ಚುನಾವಣೆಯಲ್ಲಿ ಕೋಲಾರ ವಿಧಾನಸಭಾವು ಹೈವೋಲ್ಟೆಜ್ ಕ್ಷೇತ್ರವಾಗಿ ಮಾರ್ಪಟ್ಟಿದೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಎಲೆಕ್ಷನ್​ಗೆ ನಿಲ್ಲಿಸಿ ಬಿಜೆಪಿ ಗೆಲುವು ಪಡೆಯಬೇಕೆಂದು ಹವಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ವರ್ತೂರ್​ ಪ್ರಕಾಶ್​ ಬದಲಿಗೆ ಕೃಷ್ಣಾರೆಡ್ಡಿಯನ್ನ ಕಣಕ್ಕಿಳಿಸಲು ಸಚಿವರಾದ ಡಾ.ಸುಧಾಕರ್ ಮತ್ತು ಮುನಿರತ್ನ ರಣತಂತ್ರ ರೂಪಿಸ್ತಿದ್ದಾರೆ ಎಂದು ಶಾಸಕ ಶ್ರೀನಿವಾಸಗೌಡ ಬಾಂಬ್ ಸಿಡಿಸಿದ್ದಾರೆ.

ಕ್ಷೇತ್ರದಲ್ಲಿ ಮತದಾರರನ್ನು ಸೆಳೆಯಲು ಬಿಜೆಪಿ ನಾನಾ ಕಸರತ್ತು ಮಾಡುತ್ತಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿರುವ ಕೃಷ್ಣಾರೆಡ್ಡಿಯನ್ನ ಬಿಜೆಪಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಹೊಸದಾದ ಲೆಕ್ಕಾಚಾರ ಮಾಡುತ್ತಿದ್ದು, ಮತದಾರರನ್ನ ಸೆಳೆಯಲು ತಂತ್ರಗಾರಿಕೆ ಹೆಣೆಯುತ್ತಿದೆ ಎಂಬ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿದೆ. ಇನ್ನು ಕಾಂಗ್ರೆಸ್​ನಿಂದ ಸಿದ್ದರಾಮಯ್ಯ ಅವರು ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು ಪ್ರಚಾರದಲ್ಲೂ ತೊಡಗಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಜೆಟ್‌ ಅಧಿವೇಶನಕ್ಕೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಕಿವಿ ಮೇಲೆ ಹೂವಿಟ್ಟುಕೊಂಡು ಬಂದಿದ್ದರು.

Sat Feb 18 , 2023
ಬಜೆಟ್‌ ಅಧಿವೇಶನಕ್ಕೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಆದಿಯಾಗಿ ಕಾಂಗ್ರೆಸ್‌ ನಾಯಕರೆಲ್ಲ ಕಿವಿ ಮೇಲೆ ಹೂವಿಟ್ಟುಕೊಂಡು  ಬಂದಿದ್ದರು. ಇದು ಬಜೆಟ್‌ನಷ್ಟೇ ಗಮನ ಸೆಳೆದಿತ್ತು. ಸರ್ವ ಕಾಂಗ್ರೆಸ್‌ ಶಾಸಕರು ಈ ರೀತಿ ಮಧ್ಯಾಹ್ನದವರೆಗೆ ಹೂವು ಇಟ್ಟುಕೊಂಡು ಕಾಲ ಕಳೆಯಲು ಕಾರಣವಾಗಿದ್ದು ಯಾರು ಎನ್ನುವ ಪ್ರಶ್ನೆ ಈಗ ಚರ್ಚೆಯಲ್ಲಿದೆ. ಸಾಮಾನ್ಯವಾಗಿ ಸಿದ್ದರಾಮಯ್ಯ ಅವರಂಥ ನಾಯಕರು ಇಂಥ ವಿಡಂಬನಾತ್ಮಕ ಗಿಮಿಕ್‌ಗಳಿಗೆ ಒತ್ತು ಕೊಡುವುದಿಲ್ಲ. ಎಲ್ಲವನ್ನೂ ನಾನು ವಿಧಾನಸಭೆಯಲ್ಲಿ ಮಾತಿನ ಮೂಲಕವೇ ಎದುರಿಸುವ ಛಾತಿ ಅವರದು. ಡಿ.ಕೆ. […]

Advertisement

Wordpress Social Share Plugin powered by Ultimatelysocial