ಕೋಲಾರ: ರಾಜ್ಯ ಚುನಾವಣೆಯಲ್ಲಿ ಕೋಲಾರ ವಿಧಾನಸಭಾವು ಹೈವೋಲ್ಟೆಜ್ ಕ್ಷೇತ್ರವಾಗಿ ಮಾರ್ಪಟ್ಟಿದೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಎಲೆಕ್ಷನ್ಗೆ ನಿಲ್ಲಿಸಿ ಬಿಜೆಪಿ ಗೆಲುವು ಪಡೆಯಬೇಕೆಂದು ಹವಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ವರ್ತೂರ್ ಪ್ರಕಾಶ್ ಬದಲಿಗೆ ಕೃಷ್ಣಾರೆಡ್ಡಿಯನ್ನ ಕಣಕ್ಕಿಳಿಸಲು ಸಚಿವರಾದ ಡಾ.ಸುಧಾಕರ್ ಮತ್ತು ಮುನಿರತ್ನ ರಣತಂತ್ರ ರೂಪಿಸ್ತಿದ್ದಾರೆ ಎಂದು ಶಾಸಕ ಶ್ರೀನಿವಾಸಗೌಡ ಬಾಂಬ್ ಸಿಡಿಸಿದ್ದಾರೆ.
ಕ್ಷೇತ್ರದಲ್ಲಿ ಮತದಾರರನ್ನು ಸೆಳೆಯಲು ಬಿಜೆಪಿ ನಾನಾ ಕಸರತ್ತು ಮಾಡುತ್ತಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿರುವ ಕೃಷ್ಣಾರೆಡ್ಡಿಯನ್ನ ಬಿಜೆಪಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಹೊಸದಾದ ಲೆಕ್ಕಾಚಾರ ಮಾಡುತ್ತಿದ್ದು, ಮತದಾರರನ್ನ ಸೆಳೆಯಲು ತಂತ್ರಗಾರಿಕೆ ಹೆಣೆಯುತ್ತಿದೆ ಎಂಬ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿದೆ. ಇನ್ನು ಕಾಂಗ್ರೆಸ್ನಿಂದ ಸಿದ್ದರಾಮಯ್ಯ ಅವರು ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು ಪ್ರಚಾರದಲ್ಲೂ ತೊಡಗಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada