BJP-JDS ಮೈತ್ರಿ , ಕಾಂಗ್ರೆಸ್‌ ನಾಯಕರಿಂದ ಪ್ರತಿಕ್ರಿಯೆ..!

ಮುಂಬರುವ ಲೋಕಸಭಾ ಚುನಾವಣೆಗೆ ಈಗಾಗಲೇ ರಾಜ್ಯದ ವಿಪಕ್ಷಗಳು ತಯಾರಿಯನ್ನು ಮಾಡಿಕೊಂಡಿದ್ದು. ಇದೀಗ ರಾಜ್ಯದಲ್ಲಿ ಚುನಾವಣೆಗೆ ರಂಗೇರುತ್ತಿವೆ.

ಹೌದು…BJP ಮತ್ತು JDS ಪಕ್ಷಗಳು ಇದೀಗ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿಯನ್ನು ನಡೆಸುತ್ತಿದ್ದು. ಇದೀಗ ಎಡರು ಪಕ್ಷಗಳು ಮೈತ್ರಿಯನ್ನು ಮಾಡಿಕೊಳ್ಳಲು ಸಿದ್ಧತೆಯನ್ನು ನಡೆಸುತ್ತಿದೆ. ಜೊತೆಗೆ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಿಯ ಚುಕ್ಕಾಣಿಯನ್ನು ಹಿಡಿದಿದ್ದು, ಬಿಜೆಪಿಯು ಹೀನಾಯವಾಗಿ ಸೋಲನ್ನು ಕಂಡಿದೆ. ಹಾಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಯಾವುದೇ ಕಾರಣಕ್ಕೂ ಗೆಲ್ಲಬಾರದು, ರಾಜ್ಯದಲ್ಲಿ ತನ್ನ ಅಧಿಕಾರವನ್ನು ಕಳೆದುಕೊಂಡಿರುವ ಬಿಜೆಪಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಸೋಲಬಾರದೆನ್ನುವ ಉದ್ದೇಶದಿಂದ BJPಯು JDS ಪಕ್ಷದೊಂದಿಗೆ ಮೈತ್ರಿಯನ್ನು  ಮಾಡಿಕೊಳ್ಳಲು ಸಿದ್ಧವಾಗಿದೆ.

ಇನ್ನೂ ಇದರ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ್‌ , BJP ಹಾಗೂ JDS ಮೈತ್ರಿ ಮಾಡಿಕೊಳ್ಳುವುದರಲ್ಲಿ ನಮ್ಮದೇನೂ ತಕರಾರು ಇಲ್ಲ, ನಾವು ಕಳೆದ ಬಾರಿ JDS ಜೊತೆ ಮೈತ್ರಿ ಮಾಡಿಕೊಂಡಿದ್ದೆವು, ಅವರ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಏನು ಫಲಿತಾಂಶ ಬಂತು ಅಂತ ಇಡೀ ರಾಜ್ಯದ ಜನ ಗಮನಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಹೌದು…JDS ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಏನು ಫಲಿತಾಂಶ ಬಂತು ಅಂತ ಇಡೀ ರಾಜ್ಯದ ಜನರು ಗಮನಿಸಿದ್ದಾರೆ. BJP-JDS ಮೈತ್ರಿಯಿಂದ BJPಗೆ ಏನು ಫಲ ಸಿಗುತ್ತದೆ ಅನ್ನೋದನ್ನ ಕಾದುನೋಡೋಣ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ರವರು ಹೇಳಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

8 ಕೋಟಿ ಮೌಲ್ಯದ ಚಿನ್ನ, ಇಬ್ಬರ ಬಂಧನ

Sun Sep 10 , 2023
ಭೂಪಾಲ್,ಸೆ.10- ಸ್ಕೂಟರ್‍ನಲ್ಲಿ ಚಿನ್ನ ಹಾಗೂ ವಿದೇಶಿ ಕರೆನ್ಸಿಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಧ್ಯಪ್ರದೇಶದ ಪೊಲೀಸರು, ಬಂಧಿತರಿಂದ 8 ಕೋಟಿ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಮುಂಬೈನಿಂದ ರತ್ಲಾಮ್‍ಗೆ ಚಿನ್ನವನ್ನು ಸಾಗಿಸುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸ್ ತಂಡವು ಇಲ್ಲಿನ ಸ್ಟೇಷನ್ ರಸ್ತೆ ಪ್ರದೇಶದಲ್ಲಿ ಸ್ಕೂಟರ್‍ನಲ್ಲಿ ಚಲಿಸುತ್ತಿದ್ದ ಇಬ್ಬರನ್ನು ತಡೆದು ತಪಾಸಣೆ ನಡೆಸಿದೆ. ಈ ವೇಳೆ ಟ್ರಾಲಿ ಬ್ಯಾಗ್ ಮತ್ತು ಬೆನ್ನುಹೊರೆಯಲ್ಲಿ ಸುಮಾರು 8 ಕೋಟಿ ರೂ. ಮೌಲ್ಯದ 13.245 […]

Advertisement

Wordpress Social Share Plugin powered by Ultimatelysocial