ಮುಂಬರುವ ಲೋಕಸಭಾ ಚುನಾವಣೆಗೆ ಈಗಾಗಲೇ ರಾಜ್ಯದ ವಿಪಕ್ಷಗಳು ತಯಾರಿಯನ್ನು ಮಾಡಿಕೊಂಡಿದ್ದು. ಇದೀಗ ರಾಜ್ಯದಲ್ಲಿ ಚುನಾವಣೆಗೆ ರಂಗೇರುತ್ತಿವೆ.
ಹೌದು…BJP ಮತ್ತು JDS ಪಕ್ಷಗಳು ಇದೀಗ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿಯನ್ನು ನಡೆಸುತ್ತಿದ್ದು. ಇದೀಗ ಎಡರು ಪಕ್ಷಗಳು ಮೈತ್ರಿಯನ್ನು ಮಾಡಿಕೊಳ್ಳಲು ಸಿದ್ಧತೆಯನ್ನು ನಡೆಸುತ್ತಿದೆ. ಜೊತೆಗೆ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಿಯ ಚುಕ್ಕಾಣಿಯನ್ನು ಹಿಡಿದಿದ್ದು, ಬಿಜೆಪಿಯು ಹೀನಾಯವಾಗಿ ಸೋಲನ್ನು ಕಂಡಿದೆ. ಹಾಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಗೆಲ್ಲಬಾರದು, ರಾಜ್ಯದಲ್ಲಿ ತನ್ನ ಅಧಿಕಾರವನ್ನು ಕಳೆದುಕೊಂಡಿರುವ ಬಿಜೆಪಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಸೋಲಬಾರದೆನ್ನುವ ಉದ್ದೇಶದಿಂದ BJPಯು JDS ಪಕ್ಷದೊಂದಿಗೆ ಮೈತ್ರಿಯನ್ನು ಮಾಡಿಕೊಳ್ಳಲು ಸಿದ್ಧವಾಗಿದೆ.
ಇನ್ನೂ ಇದರ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ್ , BJP ಹಾಗೂ JDS ಮೈತ್ರಿ ಮಾಡಿಕೊಳ್ಳುವುದರಲ್ಲಿ ನಮ್ಮದೇನೂ ತಕರಾರು ಇಲ್ಲ, ನಾವು ಕಳೆದ ಬಾರಿ JDS ಜೊತೆ ಮೈತ್ರಿ ಮಾಡಿಕೊಂಡಿದ್ದೆವು, ಅವರ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಏನು ಫಲಿತಾಂಶ ಬಂತು ಅಂತ ಇಡೀ ರಾಜ್ಯದ ಜನ ಗಮನಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಹೌದು…JDS ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಏನು ಫಲಿತಾಂಶ ಬಂತು ಅಂತ ಇಡೀ ರಾಜ್ಯದ ಜನರು ಗಮನಿಸಿದ್ದಾರೆ. BJP-JDS ಮೈತ್ರಿಯಿಂದ BJPಗೆ ಏನು ಫಲ ಸಿಗುತ್ತದೆ ಅನ್ನೋದನ್ನ ಕಾದುನೋಡೋಣ ಎಂದು ಗೃಹ ಸಚಿವ ಜಿ.ಪರಮೇಶ್ವರ್ರವರು ಹೇಳಿದ್ದಾರೆ.