ಬಿಜೆಪಿ ಟಿಕೆಟ್ ಆಕಾಂಕ್ಷಿಗಳ‌ ಆಗ್ರಹ.

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಪಕ್ಷದ ಟಿಕೆಟ್ ಸ್ಥಳೀಯರಿಗೆ ನೀಡಬೇಕು ಹೊರಗಿವನರಿಗೆ ನೀಡಿದಲ್ಲಿ ಜನರೇ ಅವರಿಗೆ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಹೇಳಿದರು.ಲಕ್ಷ್ಮೇಶ್ವರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿದರು.ಬಿಜೆಪಿ ಮುಖಂಡ ಜಾನು ಲಮಾಣಿ, ಪಿ.ಬಿ.ಕರಾಟೆ ಮಾತನಾಡಿ ಸ್ಥಳೀಯವಾಗಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಟಿಕೆಟ್ ನೀಡಿದರೆ ನಾವು ದುಡಿಯುತ್ತೇವೆ ಹೊರಗಿನವರಿಗೆ ಪಕ್ಷ ಅವಕಾಶ ನೀಡಬಾರದು ಎಂದು ಹೇಳಿದರು.ನಂತರ ಮಾತನಾಡಿದ ಡಾ. ಪ್ರಕಾಶ ಹೊಸಮನಿ 2018 ರಲ್ಲಿ ಚುನಾವಣೆ ಸ್ಥಳೀಯರಿಗೆ ಟಿಕೆಟ್ ನೀಡಿದಕ್ಕಾಗಿ 30 ಸಾವಿರ ಮತಗಳ ಅಂತರದಿಂದ ಕ್ಷೇತ್ರದ ಜನತೆ ಗೆಲ್ಲಿಸಿದ್ದಾರೆ. ಕ್ಷೇತ್ರದ ಮತದಾರರು ಎಲ್ಲರೂ ಪ್ರಾಮಾಣಿಕವಾಗಿ ದುಡಿದು ಶಾಸಕರನ್ನಾಗಿ ಮಾಡಿದ್ದೇವೆ 2023 ರ ವಿಧಾನ ಸಭಾ ‌ಚುನಾವಣೆಯಲ್ಲಿ ಶಿರಹಟ್ಟಿ ಮತಕ್ಷೇತ್ರಕ್ಕೆ ಸ್ಥಳೀಯವಾಗಿ ಟಿಕೆಟ್ ನೀಡಬೇಕು ಎಂದರು.ಸುದ್ದಿಗೋಷ್ಠಿಯಲ್ಲಿ ಸುಭಾಶ ಗುಡಿಮನಿ, ಮೋಹನ ಗುತ್ತಮ್ಮನ್ನವರ, ಅನೀಲ್ ಮುಳಗುಂದ ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ - ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕ

Tue Dec 13 , 2022
ಮುರುಘಾ ಮಠಕ್ಕೆ    ಹೊಸ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಉಪಕಾರ್ಯದರ್ಶಿ ಟಿಸಿ ಕಾಂತರಾಜ್ ಆದೇಶ ಹೊರಡಿಸಿದ್ದಾರೆ. ಮುರುಘ ಮಠದ ಲೆಕ್ಕಪತ್ರ,  ಹಣಕಾಸು ನಿರ್ವಹಣೆ ಮುರುಘ ಮಠದ ಚರ, ಸ್ಥಿರಾಸ್ತಿ, ಟ್ರಸ್ಟ್ , ಶಿಕ್ಷಣ ಸಂಸ್ಥೆ ಜವಾಬ್ದಾರಿ ಹಣಕಾಸು ದುರುಪಯೋಗ ತಡೆಯಲು ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada […]

Advertisement

Wordpress Social Share Plugin powered by Ultimatelysocial