ಹುಲಸೂರ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಚುನಾವಣೆ ವೇಳೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಬಸವಕಲ್ಯಾಣ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾರವರವರು ಮತಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ದುಡ್ಡಿಗೆ ಆಸೆ ಪಡದೆ ನಿಷ್ಠೆ ಮತ್ತು ಸ್ವಾಭಿಮಾನದಿಂದ ಜನಪರ ಕೆಲಸ ಮಾಡುವವರಿಗೇ ಮತ ಹಾಕಿ ಗೆಲ್ಲಿಸಿ ಎಂದು ಮತದಾರರಿಗೆ ಕಿವಿಮಾತನ್ನು ಹೇಳಿದರು. ನಂತರ ಹುಲಸೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಹುಲಸೂರು ತಾಲೂಕು ಎಂದು ಘೊಷಣೆಯಾಗಿ 3 ವರ್ಷ ಕಳೆದರು ಇದುವರೆಗು ಯಾವುದೇ ಮೂಲ ಸೌಕರ್ಯಗಳು ಸಿಕ್ಕಿಲ್ಲ ಹಾಗು ಪಟ್ಟಣ ಪಂಚಾಯಿತಿ ರಚನೆಯಾಗಿಲ್ಲ ಇದಕ್ಕೆಲ್ಲಾ ಬಿಜೆಪಿ ಸರ್ಕಾರ ಹೊಣೆ ಹಾಗೂ ನಮ್ಮ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರು ಯಾವುದೇ ಅಭಿವೃದ್ಧಿ ಪರ ಕೆಲಸ ಮಾಡುತ್ತಿಲ್ಲ ಅವರದು ಬರಿ ಸುಳ್ಳು ಆಶ್ವಾಸನೆ ಮಾತುಗಳಾಗಿವೇ ಎಂದು ಶಾಸಕ ಶರಣು ಸಲಗರ್ ವಿರುದ್ಧ ಕಿಡಿಕಾರಿದ್ದಾರೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada