ದೇಶಭಕ್ತರಾದ ಶಿವಾಜಿ ಮಹರಾಜರು, ಸಂಗೊಳ್ಳಿ ರಾಯಣ್ಣ, ವೀರರಾಣಿ ಕಿತ್ತೂರ ಚನ್ನಮ್ಮ ಅವರು ಸಮುದಾಯ ಮೀರಿ ನಿಂತು ದೇಶಕ್ಕಾಗಿ ತ್ಯಾಗ ಮಾಡಿ ದೇಶವನ್ನು ಒಗ್ಗೂಡಿಸಿದವರು, ಅವರ ಹೆಸರಲ್ಲಿ ನಾವೆಲ್ಲರು ಒಗ್ಗಟ್ಟಾಗಿ ಇರಬೇಕು, ಅವರನ್ನು ಜಾತಿಗೆ ಸೀಮಿತ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.ಶಿಗ್ಗಾವಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ, ಈಗ ನಡೆಯುತ್ತಿರುವ ಗೊಂದಲದ ಬಗ್ಗೆ ಈಗಾಗಲೇ ಸರ್ಕಾರ ಕ್ರಮ ಕೈಗೊಂಡಿದೆ. ಶಿವಾಜಿ ಮೂರ್ತಿ ಭಗ್ನಗೊಳಿಸಿದವರನ್ನು ಬಂಧಿಸಲಾಗಿದೆ ಎಂದರು.ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಶಿವಾಜಿ ಮೂರ್ತಿ ಭಗ್ನ ಗೊಳಿಸಿರುವ ಘಟನೆ ಹಿಂದೆ ಯಾರು ಇದ್ದಾರೆ ಎಂಬುದರ ಬಗ್ಗೆ ಸಮಗ್ರ ತನಿಖೆ ಮಾಡಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada