ಬಿಜೆಪಿ ಹಿನ್ನಡೆಗೆ ಜಾತಿ ಸಂಘರ್ಷ ಕಾರಣ ?

ಬಿಜೆಪಿ ಹಿನ್ನಡೆಗೆ ಜಾತಿ ಸಂಘರ್ಷ ಕಾರಣ?

ಬೆಂಗಳೂರು: ರಾಜ್ಯದಲ್ಲಿ ಈಚೆಗೆ ನಡೆದ ವಿವಿಧ ಚುನಾವಣೆಗಳಲ್ಲಿ ಆಡಳಿತ ಪಕ್ಷ ಬಿಜೆಪಿ ಹಿನ್ನಡೆ ಅನುಭವಿ

ಸಲು ವೀರಶೈವ ಲಿಂಗಾಯತ ಸಮುದಾಯದ ಒಳಜಾತಿಗಳ ನಡುವಿನ ಸಂಘರ್ಷ ಕಾರಣವೇ? ಇಂಥದ್ದೊಂದು ಚರ್ಚೆ ಈಗ ಬಿಜೆಪಿ ಪಡಸಾಲೆಯಲ್ಲಿ ದಟ್ಟವಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೆಲವು ಹಿರಿಯ ಸಚಿವರ ನಡುವೆ ಗಂಭೀರ ಚರ್ಚೆ ನಡೆದಿದೆ.

ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಹೊಸ ವರ್ಷದ ಶುಭಾಶಯ ಕೋರಲು ಮುಖ್ಯಮಂತ್ರಿ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ಡಾ| ಅಶ್ವತ್ಥನಾರಾಯಣ ಸೇರಿದಂತೆ ಹಿರಿಯ ಸಚಿವರು ಅವರ ನಿವಾಸ ಕಾವೇರಿಗೆ ತೆರಳಿ ಶುಭಾಶಯ ಕೋರಿದ ಸಂದರ್ಭಲ್ಲಿ ಈ ಬಗ್ಗೆ ಪ್ರಸ್ತಾವವಾಗಿದೆ.

ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ನಡೆದ ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಚುನಾವಣೆ, ಆ ನಂತರ ನಡೆದ ಹಾನಗಲ್‌ ಹಾಗೂ ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತ್ತು ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಹಾಗೂ ನಗರ ಸ್ಥಳೀಯ
ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿಸಿದಷ್ಟು ಸ್ಥಾನಗಳು ದೊರೆತಿಲ್ಲ ಎನ್ನುವುದು ಪಕ್ಷದ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

R Ashok : CM 1,500 ಕೋಟಿ ರೂ. ಕೊಡ್ತಿದ್ದಾರೆ | CM Basavaraj Bommai | Bjp | Speed News Kannada |

Sun Jan 2 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial