ಧಾರಾವಾಹಿಯಲ್ಲಿ ಅಭಿನಯಿಸಿರುವ ನಟಿ! ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ ಭೂಪ.

ಕಿರುತೆರೆ ಜನಪ್ರಿಯ ನಟಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಜಾದವ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಿಂ ದಿ ಧಾರಾವಾಹಿಯಲ್ಲಿ ಅಭಿನಯಿಸಿರುವ ನಟಿಯ ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅತ್ಯಾಚಾರವೆಸಗಿದ ವ್ಯಕ್ತಿ ಮತ್ತು ನಟಿ ಹಲವು ವರ್ಷಗಳಿಂದ ಪರಿಚಯವಿದ್ದು ಇಬ್ಬರು ಸ್ನೇಹಿತರಾಗಿದ್ದರು.ಇತ್ತೀಚಿಗೆ ಅವರಿಬ್ಬರ ನಡುವೆ ವೈಮನಸ್ಸು ಉಂ ಟಾದ ಕಾರಣ ಈ ಘಟನೆ ನಡೆದಿರಬಹುದು ಎಂದು ಯುವತಿ ಆಪ್ತರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಬಿಜೋಯ್‌ಗನ ಅಪಾರ್ಟೆ ಮೆಂಟ್‌ನಲ್ಲಿ ವಾಸವಿರುವ ನಟಿ ಮನೆಗೆ ಪರಿಚಿತ ವ್ಯಕ್ತಿ ಹಣ ಸಹಾಯ ಬೇಡಿ ಬಂದಿದ್ದಾನೆ.ಮನೆಯಲ್ಲಿ ನಟಿ ಒಬ್ಬಂಟಿಯಾಗಿರುವ ವಿಚಾರ ತಿಳಿದು ಅಸಭ್ಯವಾಗಿ ವರ್ತಿಸಿದ್ದಾನೆ. ಆತನಿಂದ ರಕ್ಷಿಸಿಕೊಳ್ಳಲು ಪ್ರಯತ್ನಿಸಿದಾಗ ಅತ್ಯಾ ಚಾರ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ. ಪರಿಚಿತ ವ್ಯಕಿ ತನ್ನ ವಿಡಿಯೋ ಮಾಡಿ ಹಣ ನೀಡುವಂತೆ ಒತ್ತಾಯ ಮಾಡು ತ್ತಿರು ವುದಾಗಿ ನಟಿ ತಿಳಿಸಿದ್ದಾರೆ. ಆದರೆ ವಿಡಿಯೋ ಮಾಡಿರುವುದು ನಿಜವೋ ಅಥವಾ ಸುಳ್ಳೋ ಎಂದು ತಿಳಿಯಲು ಪೊಲೀ ಸರು ಆರೋ ಪಿಯ ಮೊಬೈಲ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಅತ್ಯಾಚಾರಕ್ಕೆ ಒಳಗಾದ ನಟಿ ದೂರು ನೀಡಿರುವುದು ಒಂದು ಕಥೆಯಾದರೆ ಕೆಲ ಮೂಲಗಳಿಂದ ಬೇರೆಯದ್ದೇ ರೀತಿಯ ಸ್ಟೋರಿ ಕೇಳಿ ಬರುತ್ತಿದೆ.ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುವ ನಟಿ ತಮ್ಮ ಅಭಿಮಾನಿಗಳೆಂದು ಮೆಸೇಜ್‌ ಮಾಡುವ ಅಪರಿಚಿತರೊಂದಿಗೆ ಮಾತನಾಡುತ್ತಾರೆ. ಈ ವೇಳೆ ಮೆಸೇಜ್‌ ಮಾಡಿದ ವ್ಯಕ್ತಿಯೊಬ್ಬ ಹಣ ಸಹಾಯ ಮಾಡುವಂತೆ ಮನವಿ ಮಾಡುತ್ತಾನೆ. ಸಹಾಯ ಮಾಡು ವುದಾಗಿ ಹೇಳಿದ ನಟಿ ಹಣವನ್ನು ಆನ್‌ಲೈನ್‌ನಲ್ಲಿ ವರ್ಗಾವಣೆ ಮಾಡದೆ ಆತನನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದಾರೆ. ಆ ನಂತರ ನಡೆದ ಘಟನೆಯನ್ನು ಮಾತ್ರ ನಟಿ ಪೊಲೀಸರಿಗೆ ದೂರು ನೀಡಿರುವುದು. ನಟಿ ಮಾತ್ರವಲ್ಲದೇ ಮಾಡಲ್ ಆಗಿರುವ ಈ ಯುವತಿ ಸದ್ಯಕ್ಕೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಪೊಲೀಸರು ತನಿಖೆ ತೀವ್ರಗೊಳಿಸಿರುವುದರಿಂದ ಸದ್ಯದಲ್ಲೇ ಸತ್ಯಾಂಶ ಹೊರಬೀಳಲಿದ್ದು ಪ್ರಕರಣದ ಅಸಲಿಯತ್ತು ಏನೆಂದು ತಿಳಿಯಬಹುದಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು 'ಆತ್ಮಹತ್ಯೆ'ಗೆ ಯತ್ನ

Wed Feb 2 , 2022
ವ್ಯಕ್ತಿಯೊಬ್ಬ ಅನಧಿಕೃತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿದ್ದು, ಇದರಿಂದ ಆಕ್ರೋಶಗೊಂಡ ಆತ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.ಹೊಸದುರ್ಗ ಪಟ್ಟಣದ ಚಾಮರಾಜಪೇಟೆ ನಿವಾಸಿ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ್ದು, ಈತ ಗುತ್ತಿಗೆ ಆಧಾರಿತ ಪೌರ ಕಾರ್ಮಿಕನಾಗಿ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ. ಆದರೆ ಆರು ತಿಂಗಳಿಂದ ಸತತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ […]

Advertisement

Wordpress Social Share Plugin powered by Ultimatelysocial