ಬೆಂಗಳೂರು: ಇತ್ತೀಚಿಗೆ ಚಾಮರಾಜಪೇಟೆಯ ಮಕ್ಕಳ ಕೂಟದ ಬಳಿಯಲ್ಲಿ ಬಿಎಂಟಿಸಿ ಬಸ್ ಧಗಧಗಿಸಿ ಹೊತ್ತಿ ಉರಿದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಬಿಎಂಟಿಸಿ ಬಸ್ ಧಗಧಗಿಸಿ ಹೊತ್ತಿ ಉರಿದಿರುವ ಘಟನೆ ನಡೆದಿದೆ.ಅಲ್ಲದೇ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಬಸ್ ನಲ್ಲಿದ್ದಂತ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಗಳೂರಿನ ಜಯನಗರ ಸೌತ್ ಎಂಡ್ ಸರ್ಕಲ್ ಬಳಿಯ ಮೆಟ್ರೋ ಫ್ಲೈ ಓವರ್ ಕೆಳಗೆ ಇಂದು ಸುಮಾರು 30 ಪ್ರಯಾಣಿಕರಿದ್ದಂತ ಬಿಎಂಟಿಸಿ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದಂತ ಚಾಲಕ, ಕೂಡಲೇ ಬಸ್ ರಸ್ತೆಯಲ್ಲೇ ನಿಲ್ಲಿಸಿ, ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.ಬಸ್ಸಿನಿಂದ ಪ್ರಾಯಣಿಕರನ್ನು ಕೆಳಗೆ ಇಳಿಸುತ್ತಿದ್ದಂತೆ ನೋಡ ನೋಡುತ್ತಿದ್ದಂತೆ ಬಸ್ಸು ಸಂಪೂರ್ಣವಾಗಿ ಧಗಧಗಿಸಿ ಹೊತ್ತಿ ಉರಿದಿದೆ. ಚಾಲಕ ಅಗ್ನಿಶಾಮಕ ಸಿಬ್ಬಂದಿಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಬಸ್ಸಿನಲ್ಲಿ ಬೆಂಕಿ ತಾಂತ್ರಿಕ ಕಾರಣದಿಂದ ಉಂಟಾಗಿರಬಹುದು ಎನ್ನಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada