ಕೊನೆಗೂ ಸುಖಾಂತ್ಯ ಕಂಡ ರಾಖಿ ಸಾವಂತ್ ಮದುವೆ ವಿವಾದ: ಬುರ್ಖಾ ಧರಿಸಿದ ನಟಿ.

ಪ್ರೀತಿಸಿ ಮದುವೆಯಾದ ಆದಿಲ್ ಖಾನ್ ತಮಗೆ ಮೋಸ ಮಾಡುತ್ತಿದ್ದಾನೆ ಎಂದು ಮೊನ್ನೆಯಷ್ಟೇ ನಟಿ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಕಣ್ಣೀರಿಟ್ಟಿದ್ದರು. ಆದಿಲ್ ತನ್ನನ್ನು ಮದುವೆಯೇ ಆಗಿಲ್ಲವೆಂದು ಹೇಳುತ್ತಿದ್ದಾನೆ. ಅವನಿಂದ ನನಗೆ ಮೋಸ ಆಗುತ್ತಿದೆ ಎಂದು ರಾಖಿ ಹೇಳಿಕೊಂಡಿದ್ದರು.

ಇದೀಗ ಎಲ್ಲವೂ ಸುಖಾಂತ್ಯವಾಗಿದೆ. ರಾಖಿ ಸಾವಂತ್ ನನ್ನೊಂದಿಗೆ ಮದುವೆ ಆಗಿದ್ದಾರೆ ಎಂದು ಸ್ವತಃ ಆದಿಲ್ ಹೇಳಿಕೊಂಡಿದ್ದಾರೆ. ಇದೀಗ ಕೇಸರಿ ಬಣ್ಣದ ಬುರ್ಖಾ ಧರಿಸಿದ ರಾಖಿ ಎಲ್ಲರಿಗೂ ವಂದನೆಗಳನ್ನು ಹೇಳಿದ್ದಾರೆ.

ರಾಖಿ ಕಣ್ಣೀರು ಹಾಕುತ್ತಿದ್ದಂತೆಯೇ ಮದುವೆಯಾಗಿ ಆರು ತಿಂಗಳಿಗೆ ಈ ಮದುವೆ ಮುರಿದು ಬಿತ್ತು ಎಂದು ಹೇಳಲಾಗಿತ್ತು. ಆರು ತಿಂಗಳ ಹಿಂದೆಯಷ್ಟೇ ರಾಖಿ ಸಾವಂತ್ ಮತ್ತು ಮೈಸೂರು ಹುಡುಗ ಆದಿಲ್ ಖಾನ್ ರಿಜಿಸ್ಟರ್ ಮದುವೆ ಆಗಿದ್ದರು. ನಿಕಾ ಕೂಡ ಮಾಡಿಕೊಂಡಿದ್ದರು. ಆದರೆ, ತಮ್ಮ ಮದುವೆಯೇ ಆಗಿಲ್ಲ ಎಂದು ಆದಿಲ್ ಹೇಳುತ್ತಿದ್ದಾನೆ ಎಂದು ರಾಖಿ ರಂಪಾಟ ಮಾಡಿದ್ದರು. ಮದುವೆ ಆಗಿದ್ದರ ಗುರುತಾಗಿ ರಿಜಿಸ್ಟರ್ ಪತ್ರಗಳನ್ನೂ ರಾಖಿ ಸಾವಂತ್ ಬಹಿರಂಗ ಪಡಿಸಿದ್ದರು.

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಮಾಹಿತಿ ನೀಡಿದ್ದ ರಾಖಿ, ‘ಆರು ತಿಂಗಳ ಹಿಂದೆಯೇ ನಾವಿಬ್ಬರೂ ಮದುವೆ ಆಗಿದ್ದೇವೆ. ತಮ್ಮ ತಂಗಿಯ ಮದುವೆ ಆಗೋವರೆಗೂ ಈ ವಿಷಯವನ್ನು ಯಾರಿಗೂ ಹೇಳಬೇಡಿ ಎಂದು ಆದಿಲ್ ಹೇಳಿದ್ದ. ಹಾಗಾಗಿ ಸುಮ್ಮನಿದ್ದೆ. ಆದಿಲ್ ಮನೆಯವರಿಗೆ ನಾನು ಅಂದರೆ ಇಷ್ಟವಿಲ್ಲ. ಹಾಗಾಗಿ ಅವರೂ ಅಡ್ಡಿ ಪಡಿಸುತ್ತಿದ್ದಾರೆ. ಆದಿಲ್ ಇಷ್ಟದಂತೆ ನಾನು ಫಾತಿಮಾ ಆಗಿಯೂ ಬದಲಾಗಿದ್ದೆ. ಇಷ್ಟೆಲ್ಲ ಹೊಂದಾಣಿಕೆ ಮಾಡಿಕೊಂಡರೂ, ಅವನು ನನಗೆ ಮೋಸ ಮಾಡುತ್ತಿದ್ದಾನೆ’ ಎಂದು ರಾಖಿ ಕಣ್ಣೀರಿಟ್ಟಿದ್ದರು.

ಇತ್ತೀಚಿನ ದಿನಗಳಲ್ಲಿ ಬಾಯ್ ಫ್ರೆಂಡ್ ಆದಿಲ್ ದುರ್ರಾನಿ ಜೊತೆ ಸಾಕಷ್ಟು ಊರುಗಳನ್ನು ಸುತ್ತಿದ್ದರು ರಾಖಿ. ವಿದೇಶ ಪ್ರವಾಸಗಳನ್ನು ಮುಗಿಸಿ ಬಂದಿದ್ದಾರೆ. ಹುಡುಗನ ಊರಾದ ಮೈಸೂರಿಗೂ ಬಂದು ಹೋಗಿದ್ದಾರೆ. ಆದಿಲ್ ಕುಟುಂಬವನ್ನು ಭೇಟಿ ಮಾಡಿದ್ದ ಅವರು, ಆದಿಲ್ ಕುಟುಂಬಕ್ಕಾಗಿ ನಾನು ಬದಲಾಗುತ್ತೇನೆ ಎಂದು ಕೂಡ ಹೇಳಿದ್ದಾರೆ. ಆ ಕುಟುಂಬಕ್ಕೆ ಅರೆಬರೆ ಬಟ್ಟೆ ಹಾಕುವುದು ಇಷ್ಟವಿಲ್ಲ ಎಂದು ಹೇಳಿದ್ದರು. ಇದೀಗ ಸೈಲೆಂಟ್ ಆಗಿ ರಾಖಿ ಮೈಸೂರಿನ ಸೊಸೆಯಾಗಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಶಾಸಕನ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು.

Tue Jan 17 , 2023
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕನ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹಾಲಿ ಬಿಜೆಪಿ ಸರ್ಕಾರ ಇದ್ದರೂ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ ಬಿಜೆಪಿ ಹು – ಧಾ ಪೂರ್ವ ಮೀಸಲು ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಕ್ಷೇತ್ರದಲ್ಲಿ ಅಭಿವೃದ್ದಿ ಆಗಿಲ್ಲ, ಉದ್ಯೋಗ ಸಿಕ್ಕಿಲ್ಲ ಎಂದೂ ಪ್ರತಿಭಟನೆ ಕಾಮಗಾರಿ ಅಪೂರ್ಣ ವಾಗಿವೆ ಎಂದೂ ಆರೋಪ ಕ್ರಾಂತಿ ಕಿರಣ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆವರಣ […]

Advertisement

Wordpress Social Share Plugin powered by Ultimatelysocial