ಈಶ್ವರಪ್ಪ ವಿರುದ್ದ ಎಫ್ ಐಆರ್ ದಾಖಲಾಗಿದೆ,

ಮಂಗಳೂರು: ಈಶ್ವರಪ್ಪ ವಿರುದ್ದ ಎಫ್ ಐಆರ್ ದಾಖಲಾಗಿದೆ, ಎಲ್ಲಾ ವಿವರ ಪಡೆದುಕೊಂಡಿದ್ದೇನೆ. ಈ ಬಗ್ಗೆ ಅವರ ಹತ್ತಿರ ಮಾತನಾಡುತ್ತೇನೆ, ಫೋನಿನಲ್ಲೂ ಕೆಲವು ವಿಚಾರ ಮಾತನಾಡಿದ್ದೇನೆ, ಅವರನ್ನು ಕರೆಸಿ, ಕೆಲವು ವಿಚಾರ ಮತ್ತೆ ಮಾತನಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ರಾಜೀನಾಮೆ ಬಗ್ಗೆ ಏನು ಹೇಳಿದ್ದಾರೆ ಗೊತ್ತಿಲ್ಲ, ಒನ್ ಟು ಒನ್ ಮಾತನಾಡಿದರೆ ಸ್ಪಷ್ಟವಾಗುತ್ತದೆ. ಅಲ್ಲಿನ ಘಟನೆ ಮತ್ತು ಎಫ್ ಐಆರ್ ಆದ ನಂತರ ಏನಾಗಿದೆ ಎಂದು ಅವರ ಜೊತೆ ಮಾತನಾಡುತ್ತೇನೆ ಎಂದರು.

ವಿರೋಧ ಪಕ್ಷದವರು ಇದರಲ್ಲಿ ತಪ್ಪು ಕಂಡು ಹುಡುಕೋ ಪ್ರಯತ್ನ ಮಾಡುತ್ತಿದ್ದಾರೆ. ತನಿಖೆ ನಂತರ ಸತ್ಯಾಂಶ ಹೊರಗೆ ಬರುತ್ತದೆ. ಯಾರು ಇದರಲ್ಲಿ ಪಾತ್ರ ವಹಿಸಿದ್ದಾರೆ, ಮತ್ತು ಇದರ ಹಿನ್ನೆಲೆ ಏನು ಅನ್ನುವುದು ತನಿಖೆಯಲ್ಲಿ ಗೊತ್ತಾಗುತ್ತದೆ. ಈ ಪ್ರಕರಣದಲ್ಲಿ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ, ನಾವು ಹಸ್ತಕ್ಷೇಪ ಮಾಡುವುದಿಲ್ಲ. ವರಿಷ್ಟರಿಗೆ ಎಲ್ಲಾ ವಿಚಾರ ಗೊತ್ತಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಮುದಾಯದ ವರ್ತಕರಿಂದಲೇ ವಸ್ತುಗಳನ್ನು ಖರೀದಿಸಬೇಕೆಂದು ಫತ್ವಾ!

Wed Apr 13 , 2022
ಮುಂಬೈ,ಏ.13- ರಂಜಾನ್ ಮಾಸದ ಸಂದರ್ಭದಲ್ಲಿ ಮುಸ್ಲಿಮರು ತಮ್ಮ ಸಮುದಾಯದ ವರ್ತಕರಿಂದಲೇ ವಸ್ತುಗಳನ್ನು ಖರೀದಿಸಬೇಕೆಂದು ಫತ್ವಾ ಹೊರಡಿಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇತ್ತೀಚೆಗೆ ಮುಸ್ಲಿಮರಿಗೆ ಗೌಪ್ಯವಾಗಿ ಫತ್ವಾ ಹೊರಡಿಸಿ ಕೇವಲ ಮುಸ್ಲಿಂ ಸಮುದಾಯದವರ ಮಳಿಗೆಗಳಲ್ಲಿಯೇ ವಸ್ತುಗಳನ್ನು ಖರೀದಿಸಬೇಕೆಂದು ಹೇಳಿರುವುದರಿಂದ ಹಿಂದೂ ವರ್ತಕರಿಗೆ ಭಾರೀ ನಷ್ಟವಾಗಿದೆ. ಸಮುದಾಯಗಳ ನಡುವೆ ಬಿರುಕು ಮೂಡಿಸಲು ಕೆಲವು ಮೂಲಭೂತವಾದಿಗಳು ಪ್ರಯತ್ನಿಸುತ್ತಿದ್ದಾರೆ. ಶೇ.45ರಿಂದ 50 ರಷ್ಟು ವ್ಯಾಪಾರ ನಷ್ಟವಾಗುತ್ತಿದೆ ಎಂದು ಹಿಂದೂ ಸಮುದಾಯದ ವರ್ತಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial