ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದು,

ಹುಬ್ಬಳ್ಳಿ : ಸಚಿವ ಕೆ.ಎಸ್.

ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದು, ಸ್ವಪ್ರೇರಣೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಈಶ್ವರಪ್ಪ ಅವರು ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಅವರ ಜೊತೆ ಮಾತನಾಡಿದ್ದೇನೆ. ಸ್ವಪ್ರೇರಣೆಯಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ.

ಜೊತೆಗೆ ಪ್ರಕರಣವನ್ನು ಆದಷ್ಟು ಬೇಗ ತನಿಖೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ. ಆದಷ್ಟು ಬೇಗ ಆರೋಪ ಮುಕ್ತನಾಗುವ ವಿಶ್ವಾಸ ಅವರಿಗಿದೆ ಎಂದು ತಿಳಿಸಿದರು.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತೇವೆ. ಪೊಲೀಸರು ತಮ್ಮ ಕೆಲಸವನ್ನು ಮಾಡಲು ಬಿಡಬೇಕು. ಇಡೀ ಬೆಳವಣಿಗೆ ತನಿಖೆ ಆದ ಮೇಲೆ ಈಶ್ವರಪ್ಪ ಆರೋಪ ಮುಕ್ತರಾಗುತ್ತಾರೆ ಎನ್ನುವ ವಿಶ್ವಾಸವಿದೆ. ಈ ಪ್ರಕರಣದಲ್ಲಿ ಸರ್ಕಾರಕ್ಕೆ ಹಿನ್ನಡೆ, ಮುನ್ನಡೆ ಅನ್ನೊ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನಲ್ಲಿ 'The Conversion' ಸಿನಿಮಾದ ಪ್ರೀಮಿಯರ್ ಶೋ..ಮೇ 6ಕ್ಕೆ ಬೆಳ್ಳಿತೆರೆಗೆ ಮತಾಂತರ ವಿಷಯಾಧಾರಿತ ಚಿತ್ರ ಎಂಟ್ರಿ!

Fri Apr 15 , 2022
ಮತಾಂತರ ವಿಷಯಾಧಾರಿತ ಸಿನಿಮಾ The Conversion ಬೆಳ್ಳಿತೆರೆಗೆ ಬರೋದಿಕ್ಕೆ ಸಜ್ಜಾಗಿದೆ. ಮೇ 6ರಂದು ಸಿನಿಮಾ ತೆರೆಗೆ ಬರ್ತಿದ್ದು, ಈ ಹಿನ್ನೆಲೆ ಚಿತ್ರತಂಡ ವಿವಿಧ ರಾಜ್ಯಗಳಲ್ಲಿ ಪ್ರೀಮಿಯರ್ ಶೋ ಹಮ್ಮಿಕೊಂಡಿತ್ತು.ಇತ್ತೀಚೆಗಷ್ಟೇ ಅಹಮದಬಾದ್ ನಲ್ಲಿ ಪ್ರೀಮಿಯರ್ ಶೋ ನಡೆಸಿದ್ದ ಚಿತ್ರತಂಡ ಮೊನ್ನೆ ಮೊನ್ನೆಯಷ್ಟೇ ಬೆಂಗಳೂರಿನ ಗರುಡ ಮಾಲ್ ನಲ್ಲಿಯೂ ಪ್ರೀಮಿಯರ್ ಶೋ ಆಯೋಜಿಸಿತ್ತು‌. ಈ ವಿಶೇಷ ಶೋಗೆ ಹಿಂದು ಸಂಘಟನೆಯ ಮುಖ್ಯಸ್ಥರು, ಪ್ರಶಾಂತ್ ಸಂಬರ್ಗಿ ಸೇರಿದಂತೆ ಹಲವರು ಭಾಗವಹಿಸಿ ಸಿನಿಮಾ ವೀಕ್ಷಣೆ ಮಾಡಿದರು.ವಿನೋದ್ […]

Advertisement

Wordpress Social Share Plugin powered by Ultimatelysocial