ರಾಜ್ಯದಲ್ಲಿ ನಾಳೆಯಿಂದ 9 ಮತ್ತು 10ನೇ ತರಗತಿ ಪ್ರೌಢಶಾಲೆ ತರಗತಿಗಳನ್ನು ಆರಂಭಿಸುತ್ತಿದ್ದೇವೆ,

ಹುಬ್ಬಳ್ಳಿ:ರಾಜ್ಯದಲ್ಲಿ ನಾಳೆಯಿಂದ 9 ಮತ್ತು 10ನೇ ತರಗತಿ ಪ್ರೌಢಶಾಲೆ ತರಗತಿಗಳನ್ನು ಆರಂಭಿಸುತ್ತಿದ್ದೇವೆ, ಶಾಂತಿಯುತವಾಗಿ ತರಗತಿಗಳು ಆರಂಭವಾಗಿ ನಿರಾತಂಕವಾಗಿ ಸಾಗುವುದು ಮೊದಲಿನಂತೆ ಸೌಹಾರ್ದಯುತವಾಗಿ ವಿದ್ಯಾರ್ಥಿಗಳು ಶಾಲೆಗಳಿಗೆ ಬಂದು ಹೋಗುವುದು ನಮ್ಮ ಆದ್ಯತೆಯಾಗಿದೆ ಎದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಇಂದು ತಮ್ಮ ಶಿಗ್ಗಾಂವ್ ಕ್ಷೇತ್ರಕ್ಕೆ ತೆರಳಲಿರುವ ಅವರು ಅದಕ್ಕೂ ಮೊದಲು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪ್ರೌಢಶಾಲೆ ತರಗತಿಗಳು ಹೇಗೆ ನಡೆಯುತ್ತವೆ ಎಂದು ನೋಡಿಕೊಂಡು ಮುಂದೆ ಕಾಲೇಜುಗಳನ್ನು ಆರಂಭಿಸುತ್ತೇವೆ. ನಮ್ಮ ಅಧಿಕಾರಿಗಳು ಶಾಲೆಗಳ ಸುತ್ತಮುತ್ತ ತೀವ್ರ ಎಚ್ಚರಿಕೆ ವಹಿಸಲಿದ್ದಾರೆ.ಈಗಾಗಲೇ ಶಾಲಾ ಆಡಳಿತ ಮಂಡಳಿ, ಜಿಲ್ಲಾಧಿಕಾರಿಗಳಿಗೆ ಶಾಂತಿ ಸಭೆಗಳನ್ನು ನಡೆಸಲು ಸೂಚಿಸಿದ್ದೇನೆ ಎಂದರು.ಶಾಲೆಗಳು ಶಾಂತಿಯುತವಾಗಿ ಮೊದಲಿನಂತೆ ನಡೆಯುವುದು ನಮ್ಮ ಆದ್ಯತೆಯಾಗಿದೆ. ಹೀಗಾಗಿ ಸೋಷಿಯಲ್ ಮೀಡಿಯಾಗಳಲ್ಲಿ, ಬಹಿರಂಗವಾಗಿ ಯಾರು ಕೂಡ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡದಂತೆ ನೋಡಿಕೊಳ್ಳುವಂತೆ ಹೇಳಿದ್ದೇನೆ ಎಂದರು.ಹೈಕೋರ್ಟ್​ ಸೂಚನೆ ಮೇರೆಗೆ ತರಗತಿಗಳು ಆರಂಭವಾಗುತ್ತಿದೆ. ಸರ್ಕಾರ 9 ಹಾಗು 10ನೇ ತರಗತಿ ಆರಂಭಕ್ಕೆ ಸೂಚನೆ ನೀಡಿದೆ. ಶಾಲೆಗಳಿಗೆ ಹಿಜಾಬ್-ಕೇಸರಿ ಶಾಲಿಗೆ ಅನುಮತಿ ಇಲ್ಲ , ಸಮವಸ್ತ್ರದಲ್ಲಿ ವಿದ್ಯಾರ್ಥಿಗಳು ಶಾಲೆಗಳಿಗೆ ತೆರಳುವಂತೆ ಸೂಚಿಸಿದೆ. ಫೆಬ್ರವರಿ 15ರಿಂದ ಪದವಿ ಕಾಲೇಜುಗಳ ತರಗತಿ ಆರಂಭಕ್ಕೆ ನಿರ್ಧಾರ ಮಾಡಿದೆ. ಸರ್ಕಾರವು ಶಾಲೆಆವರಣದಲ್ಲಿ ಅಹಿತಕರ ಘಟನೆ ನಡೆಯದಂತೆ ಎಚ್ಚರ ನೀಡಿದ್ದು , ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲು ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

(ಫೆಬ್ರವರಿ 13) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ.

Sun Feb 13 , 2022
ದೇಶದ ಸರ್ಕಾರಿ ತೈಲ ಕಂಪನಿಗಳು ಇಂದು ಭಾನುವಾರ (ಫೆಬ್ರವರಿ 13) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ 100 ದಿನಗಳಿಂದ(ನವೆಂಬರ್​ 4ರಿಂದ ಇಂದಿನ ತನಕ) ಇಂಧನ ದರ ಸ್ಥಿರವಾಗಿದೆ.ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ […]

Advertisement

Wordpress Social Share Plugin powered by Ultimatelysocial