ಇಲ್ಲಿಯೇ ಇದ್ದು ವಿದೇಶಗಳ ವಿಳಾಸ ತೋರಿಸಿ ನಕಲಿ ಸಾಮಾಜಿಕ ಜಾಲತಾಣಗಳ ಖಾತೆಗಳ ಮೂಲಕ ಶಾಂತಿಭಂಗ !

ಹುಬ್ಬಳ್ಳಿ,ಏ.24- ಇಲ್ಲಿಯೇ ಇದ್ದು ವಿದೇಶಗಳ ವಿಳಾಸ ತೋರಿಸಿ ನಕಲಿ ಸಾಮಾಜಿಕ ಜಾಲತಾಣಗಳ ಖಾತೆಗಳ ಮೂಲಕ ಶಾಂತಿಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೇಶ, ರಾಜ್ಯದಲ್ಲಿಯೇ ಕುಳಿತು ಬೇರೆ ದೇಶಗಳ ವಿಳಾಸ ನೀಡಿ ಆತಂಕ ಒಡ್ಡುವ ಕೃತ್ಯಗಳನ್ನು ಸೃಜಿಸುವವರ ವಿರುದ್ಧ ತನಿಖೆ ಮಾಡಿ, ಖಚಿತ ಮಾರ್ಗಗಳ ಮೂಲಕ ಪತ್ತೆ ಮಾಡಲಾಗುವುದು ಎಂದರು.

ಬಳಿಕ ಕೇಂದ್ರ ಸರ್ಕಾರದ ಮೂಲಕ ವಿದೇಶಗಳ ಭದ್ರತಾ ವಿಭಾಗಗನ್ನು ಸಂಪರ್ಕಿಸಿ ಮಾಹಿತಿ ಸಂಗ್ರಹಿಸಲಾಗುವುದು. ಪೂರ್ಣ ಪ್ರಮಾಣದ ತನಿಖೆ ಕೈಗೊಂಡು ಇಮೇಲ್ ಮೂಲವನ್ನು ಪತ್ತೆ ಮಾಡಿ, ಪ್ರಕರಣದ ಆಳಕ್ಕೆ ಹೋಗಿ ತನಿಖೆ ನಿರ್ವಹಿಸಲಾಗುವುದು ಎಂದು ತಿಳಿಸಿದರು.

ಹುಬ್ಬಳ್ಳಿ ಗಲಭೆಯನ್ನು ಸಾಮಾನ್ಯ ಪ್ರಕರಣವೆಂದು ಪರಿಗಣಿಸಿಲ್ಲ. ಪೊಲೀಸ್ ಠಾಣೆಯ ಮೇಲೆ ದೊಡ್ಡ ಸಂಖ್ಯೆಯಲ್ಲಿ ಸಂಘಟಿತರಾಗಿ ದಾಳಿ ಮಾಡಲು ಕುಮ್ಮಕ್ಕು ನೀಡಿದವರ ಬಗ್ಗೆ ಈಗಾಗಲೇ ಬಂಧಿತರಾದವರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಘಟನೆಯ ಹಿಂದೆ ಇರುವ ಎಲ್ಲರನ್ನೂ ಶಿಕ್ಷೆಗೆ ಒಳಪಡಿಸಲಾಗುವುದು ಎಂದರು. ಪಿಎಸ್‍ಐ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗಿರುವವರು ಯಾರೇ ಇದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಇಬ್ಬರು ಹುಡುಗರು ಒಟ್ಟಿಗೆ ಸೈಕಲ್ ತುಳಿಯುವ ಉಲ್ಲಾಸದ ಕ್ಲಿಪ್ ಅನ್ನು ಹಂಚಿಕೊಂಡಿದ್ದ,ಆನಂದ್ ಮಹೀಂದ್ರಾ!

Sun Apr 24 , 2022
ಇಂದು ವೈರಲ್ ವಿಡಿಯೋ: ಬಿಲಿಯನೇರ್ ಉದ್ಯಮಿ ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟರ್‌ನಲ್ಲಿ ನಿಯಮಿತವಾಗಿ ಪೋಸ್ಟ್‌ಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಾರೆ, ಇದು 9 ಮಿಲಿಯನ್ ಅನುಯಾಯಿಗಳನ್ನು ಹೊಂದಿದೆ, ಇದು ಜನರಿಗೆ ಸ್ಫೂರ್ತಿ ನೀಡುತ್ತದೆ. ಇತ್ತೀಚೆಗೆ, ಮಹೀಂದ್ರಾ ಗ್ರೂಪ್ ಅಧ್ಯಕ್ಷರು ಇಬ್ಬರು ದೇಸಿ ಹುಡುಗರು ಒಟ್ಟಿಗೆ ಬೈಸಿಕಲ್ ಸವಾರಿ ಮಾಡುವ ವೀಡಿಯೊವನ್ನು ಸಾಧ್ಯವಾದಷ್ಟು ತಮಾಷೆಯಾಗಿ ಟ್ವೀಟ್ ಮಾಡಿದ್ದಾರೆ. ವೀಡಿಯೊ ಜೊತೆಗೆ, ವ್ಯಾಪಾರ ಉದ್ಯಮಿ ಬರೆದಿದ್ದಾರೆ, “ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್ ಸಹ ಸಹಯೋಗ […]

Advertisement

Wordpress Social Share Plugin powered by Ultimatelysocial