ಸಿಎಂ ಬೊಮ್ಮಾಯಿ ಲಂಡನ್ ಪ್ರವಾಸ ಕೊನೆ ಕ್ಷಣದಲ್ಲಿ ರದ್ದು!

ಬೆಂಗಳೂರು,ಮೇ 13- ಮುಖ್ಯಮಂತ್ರಿಗಳ ಬಹುನಿರೀಕ್ಷಿತ ಲಂಡನ್ ಪ್ರವಾಸ ಕೊನೆ ಕ್ಷಣದಲ್ಲಿ ರದ್ದುಗೊಂಡಿದೆ. ಇದೇ 19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಂಡನ್‍ಗೆ ತೆರಳಬೇಕಾಗಿತ್ತು.

ಇದಕ್ಕಾಗಿ ಸಿದ್ದತೆಯನ್ನು ಸಹ ಕೈಗೊಳ್ಳಲಾಗಿತ್ತು.

ಆದರೆ ಕೊನೆಕ್ಷಣದಲ್ಲಿ ಅವರ ಲಂಡನ್ ಪ್ರವಾಸ ರದ್ದುಗೊಂಡಿದೆ. ಇದೀಗ ಪೂರ್ವ ನಿಗಯಂತೆ ಇದೇ 21ರಂದ ದಾವೋಸ್‍ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರಳಲಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ದಾವೋಸ್‍ಗೆ ತೆರಳಲಿದ್ದಾರೆ.

ದಾವೋಸ್‍ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನ ನಡೆಯಲಿದ್ದು, ಮುಖ್ಯಮಂತ್ರಿಯವರು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಹ್ವಾನ ನೀಡಲಿದ್ದಾರೆ.

ಪ್ರತಿ ವರ್ಷ ದಾವೋಸ್‍ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನ ನಡೆಯಲಿದೆ. ವಿಶ್ವದ ಅತ್ಯಂತ ಮುಂಚೂಣಿಯಲ್ಲಿರುವ ಉದ್ಯಮಿಗಳು ಇಲ್ಲಿ ಭಾಗವಹಿಸುತ್ತಾರೆ. ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಈ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆಗೆ ಆಹ್ವಾನ ನೀಡುವುದು ವಾಡಿಕೆಯಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಂಗ್ ಟೈಗರ್ ಬರ್ತ್ ಡೇಗೆ ಡಬ್ಬಲ್ ಧಮಾಕಾ....ತಾರಕ್ ಹುಟ್ಟುಹಬ್ಬದ ದಿನವೇ ಜೀ5 OTTಗೆ RRR ಎಂಟ್ರಿ

Fri May 13 , 2022
ಕನ್ನಡ, ತಮಿಳು, ಹಿಂದಿ,‌ ಮಲಯಾಳಂ, ಮರಾಠಿ, ಗುಜರಾತಿ, ಬೆಂಗಾಲಿ ಹೀಗೆ ನಾನಾ ಭಾಷೆಗಳ‌, ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳನ್ನು ಚಿತ್ರಪ್ರೇಮಿಗಳ ಹಾಕುತ್ತಿರುವ ಪ್ರತಿಷ್ಠಿತ ಒಟಿಟಿ ಸಂಸ್ಥೆ ಜೀ5 ಈ ವರ್ಷದ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ RRR ಚಿತ್ರವನ್ನು ಪ್ರೇಕ್ಷಕರ ಮುಂದೆ ಪ್ರಸ್ತುತಪಡಿಸ್ತಿದೆ. ತಾರಕ್ ಬರ್ತ್ ಡೇಗೆ RRRಎಸ್ ಎಸ್ ರಾಜಮೌಳಿ, ಜೂನಿಯರ್ ಎನ್ ಟಿಆರ್ ಹಾಗೂ ರಾಮ್ ಚರಣ್ ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ಮೆಗಾ ಬ್ಲಾಕ್ ಬಸ್ಟರ್ ಹಿಟ್ […]

Advertisement

Wordpress Social Share Plugin powered by Ultimatelysocial