ಹೈದರಾಬಾದ್‌ಗೆ ತೆರಳಿದ ಸಿಎಂ:

ಬೆಂಗಳೂರು, ಜು. 02: ಇಂದಿನಿಂದ ಎರಡು ದಿನಗಳ ಕಾಲ ತೆಲಂಗಾಣ ರಾಜ್ಯದ ಹೈದರಾಬಾದಿನಲ್ಲಿ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಿಂದ ಹೈದರಾಬಾದಿಗೆ ತೆರಳಿದರು.

“ಬಿಜೆಪಿ ರಾಷ್ಟ್ರೀಯ ಮುಖಂಡರು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಸೇರಿದಂತೆ ಇನ್ನು ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸಾಂದರ್ಭಿಕವಾಗಿ ಅವರನ್ನು ಭೇಟಿ ಮಾಡಲಾಗುವುದು. ನಾಳೆ ಸಂಜೆ ಹಿಂತಿರುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರಿಗೆ ಬೆಂಗಳೂರಿನಲ್ಲಿ ತಿಳಿಸಿದರು.

ಪೌರಕಾರ್ಮಿಕರ ಬಗ್ಗೆ ಸಹಾನುಭೂತಿ ಕ್ರಮ:

ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ ಸರ್ಕಾರ ಒಪ್ಪಿಕೊಂಡಿದೆ. ಕಾನೂನಾತ್ಮಕ ವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು ರೂಪಿಸಲಾಗಿದೆ. ಸಮಿತಿ ಶಿಫಾರಸ್ಸು ಮಾಡಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಲಾಗುವುದು. ಪೌರಕಾರ್ಮಿಕರ ಸಂರಕ್ಷಣೆಗೆ ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ದೃಷ್ಟಿಯಿಂದ ಖಾಯಂ ಆಗಿ ಸುರಕ್ಷತೆ ನೀಡಲು ಒಪ್ಪಲಾಗಿದೆ. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು. ಸೌಹಾರ್ದತೆಯಿಂದ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೋಷಕರೇ ಎಚ್ಚರ..! ಶಾಲೆ ಆರಂಭವಾದ ಬೆನ್ನಲ್ಲೇ, ಮಕ್ಕಳಲ್ಲಿ ʻ ಪೆನ್ ಸಿಂಡ್ರೋಮ್ ʼ ಸಮಸ್ಯೆ ಹೆಚ್ಚಳ

Sat Jul 2 , 2022
ಕೊರೊನಾ ಕಡಿಮೆಯಾದ ಬೆನ್ನಲ್ಲೇ ಇದೀಗ ಶಾಲೆಗಳು ಆರಂಭವಾಗಿದೆ. ಎರಡವರೆ ವರ್ಷಗಳ ಕಾಲ ಅನ್‌ಲೈನ್‌ ಕ್ಲಾಸ್‌ ಕೇಳುತ್ತಿದ್ದ ಪುಟಾಣಿ ಮಕ್ಕಳು ಇದೀಗ ಏಕಾಏಕಿ ಭಾರದ ಬ್ಯಾಗ್‌ ಹೊರುವುದರಿಂದ ಪೋಷಕರಿಗೆ ಹೊಸ ಆತಂಕ ಶುರುವಾಗಿದೆ. ಸ್ಕೂಲ್ ಬ್ಯಾಗ್ ಅನ್ನೋದು ಮಕ್ಕಳಿಗೆ ದೊಡ್ಡ ಹೊರೆ. ಕೆಜಿಗಟ್ಟಲೆ ಪುಸ್ತಕ ಹೊತ್ತು ಪುಟಾಣಿಗಳು ಸುಸ್ತಾಗ್ತಾರೆ. ಪ್ರತಿದಿನ ದೂರದ ಊರುಗಳಿಂದ ನಡೆದುಕೊಂಡು ಶಾಲೆಗೆ ಹೋಗುವ ಮಕ್ಕಳು ಅಷ್ಟಿಷ್ಟಲ್ಲ.. ಏಕಾಏಕಿ ಭಾರದ ಬ್ಯಾಗ್‌ ಹೋರುತ್ತಿರೋದ್ರಿಂದ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ. ಭಾರ […]

Advertisement

Wordpress Social Share Plugin powered by Ultimatelysocial