ಕೊಡಗು ಜಿಲ್ಲೆಯ ಮಡಿಕೇರಿಯಿಂದ ದ.ಕ ಜಿಲ್ಲೆಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿಗೆ ಆಗಮನ
ಕಲ್ಲುಗುಂಡಿಯ ಭೂಕಂಪ ಪೀಡಿತ ಪ್ರದೇಶದ ನಾಗೇಶ್ ಎಂಬವರ ಮನೆಗೆ ಭೇಟಿ
ಹಾನಿಯಾದ ಮನೆಯಲ್ಲಿದ್ದವರ ಸಮಸ್ಯೆ ಆಲಿಸಿದ ಸಿಎಂ ಬೊಮ್ಮಾಯಿ
ಬಳಿಕ ಅವರ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಸೂಚನೆಸಿಎಂರಿಂದ ಉಪ್ಪಿನಂಗಡಿ ನೇತ್ರಾವತಿ ನದಿಯ ಬ್ರಿಜ್ ವೀಕ್ಷಣೆ
ಕಂದಾಯ ಸಚಿವ ಆರ್.ಅಶೋಕ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಸಚಿವ ಎಸ್.ಅಂಗಾರ, ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸಾಥ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನೇತ್ರಾವತಿ ನದಿಯ ಬ್ರಿಜ್ ಬಳಿ ನಿರ್ಮಾಣವಾಗುತ್ತಿರುವ ಗುಡ್ಡ ಕುಸಿತಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ , ಕಂದಾಯ ಸಚಿವ ಆರ್ ಅಶೋಕ್ , ಇಂಧನ ಸಚಿವ ವಿ ಸುನಿಲ್ ಕುಮಾರ್, ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್, ಮೀನುಗಾರಿಕೆ ಸಚಿವ ಎಸ್ ಅಂಗಾರ ಮತ್ತು ಇತರರು ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: