ಇದೆ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು, ಜುಲೈ 20: ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕಬಿನಿ ಜಲಾಶಯದ ಉದ್ಯಾನವನವನ್ನು ಸರ್ಕಾರ ಮಾಡಬೇಕೋ ಅಥವಾ ಪಿಪಿಪಿ ಮಾದರಿಯಲ್ಲಿ ಮಾಡಬೇಕೋ ಎಂಬ ಗೊಂದಲದಲ್ಲಿದೆ. ಗೊಂದಲ ವನ್ನು ಆದಷ್ಟು ಬೇಗನೇ ನಿವಾರಿಸಿ ಕಾಮವಾರಿಯನ್ನು ಕೈಗೊಳ್ಳಲಾಗುವುದು ಎಂದರು.

ಹೆಚ್.ಡಿ.ಕೋಟೆಗೆ ವಿಶೇಷ ಕಾರ್ಯಕ್ರಮ
ಹೆಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದರ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ಶಿಕ್ಷಣ ವಲಯದಲ್ಲಿ ಅತಿ ಹೆಚ್ಚಿನ ಶಾಲಾ ಕಟ್ಟಡಗಳ ನಿರ್ಮಾಣ, ಪಿ ಹೆಚ್ ಸಿ ಕೇಂದ್ರಗಳನ್ನು ಸಿ.ಹೆಚ್.ಸಿ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಶಾಸಕರಿಗೆ ರಸ್ತೆ, ಮನೆಗಳ ನಿರ್ಮಾಣ ಕ್ಕೆ ಅನುದಾನ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಕೂಡಲೇ ಅವುಗಳ ಬಗ್ಗೆ ಗಮನ ಹರಿಸಿ ಬಿದ್ದುಹೋಗಿರುವ ಮನೆಗಳಿಗೆ ಗೊಂದಲ ನಿವಾರಿಸಿ, ಅನುದಾನ ಬಿಡುಗಡೆ ಮಾಡುವಂತೆ ಸೂಚನೆ ನೀಡಿದೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಎರಡು ಏತ ನೀರಾವರಿ ಯೋಜನೆ ಹುತಾತ್ಮ ರೈತರಿಗೆ ಅರ್ಪಣೆ: ಸಚಿವ ಮುನೇನಕೊಪ್ಪ*

Wed Jul 20 , 2022
ಹುಬ್ಬಳ್ಳಿ; ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹುಬ್ಬಳ್ಳಿ ತಾಲೂಕಿನ ಜ್ವಲಂತ ಸಮಸ್ಯೆಗಳ ಕುರಿತು ಸಚಿವ ಶಂಕರಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಸಾರ್ವಜನಿಕರ ಜ್ವಲಂತ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಈ ಬಗ್ಗೆ ಪಿಡಬ್ಲೂಡಿ, ಸಾರಿಗೆ ಅಧಿಕಾರಿಗಳು, ಕೆಡಿಪಿ ಸದಸ್ಯರ ಸಮ್ಮುಖದಲ್ಲಿ ಸಮಸ್ಯೆಗಳನ್ನು ಆಲಿಸಲಾಗಿದೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಗಳನ್ನು ಜರುಗಿಸಲಾಗುತ್ತದೆ […]

Advertisement

Wordpress Social Share Plugin powered by Ultimatelysocial