ಬಾಂಬೆ ಬಾಯ್ಸ್ ಮರಳಿ ಕಾಂಗ್ರೆಸ್‌ಗೆ ಬರುವುದಾದರೆ ಅರ್ಜಿ ಹಾಕಿ ಬರಬಹುದು

 ದೇಶದಲ್ಲಿ ಭ್ರಷ್ಟಾಚಾರದ ರಾಜಧಾನಿ ಕರ್ನಾಟಕ ಎಂಬುದು ಜಗಜ್ಜಾಹೀರಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆರೋಪಿಸಿದ್ದಾರೆ.ಹಾವೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರ ಕೆಲಸ ಭ್ರಷ್ಟಾಚಾರ. ಇದು ಅತಿಭ್ರಷ್ಟ ಸರ್ಕಾರ, 40 ಪರ್ಸೆಂಟೇಜ್‌ ಸರ್ಕಾರ ರೈತವಿರೋಧಿ ಜನವಿರೋಧಿ ಸರ್ಕಾರ ಎಂದು ಆರೋಪಿಸಿದರು. ಯುವಜನತೆಗೆ ಉದ್ಯೋಗ ನೀಡದ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಜನ ಈಗಾಗಲೇ ಬಿಜೆಪಿ ಸೋಲಿಸಲು ಕಾಂಗ್ರೆಸ್ ಗೆಲ್ಲಿಸುವ ಸಂಕಲ್ಪ ಮಾಡಿದ್ದಾರೆ. ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ವಿಶ್ವಾಸವಿದೆ ಎಂದು ಸಲೀಂ ಅಹ್ಮದ್ ತಿಳಿಸಿದರು.ಕೃಷ್ಣಾ ನದಿ ವಿಚಾರವಾಗಿ ಇದೇ 30 ರಂದು ವಿಜಯಪುರದಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಆಯೋಜನೆ ಮಾಡಿದೆ. ಮಹದಾಯಿ ವಿಚಾರವಾಗಿ ಜನವರಿ 2 ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಗುವುದು. ಜನವರಿ 8 ರಂದು ಚಿತ್ರದುರ್ಗದಲ್ಲಿ ಎಸ್ಸಿಎಸ್ಟಿ ಸಮಾವೇಶ ಆಯೋಜನೆ ಮಾಡಲಾಗಿದೆ. ಅದಾದ ನಂತರ ರಾಜ್ಯದ ಪ್ರಮುಖ ಮುಖಂಡರೆಲ್ಲ ಸೇರಿ ಸಾಮೂಹಿಕ ನಾಯಕತ್ವದಲ್ಲಿ ಬೆಳಗಾವಿಯಿಂದ 20 ಜಿಲ್ಲೆಗಳಲ್ಲಿ ಬಸ್ ಪ್ರವಾಸ ಹಮ್ಮಿಕೊಂಡಿದ್ದೇವೆ. ಪ್ರವಾಸದಲ್ಲಿ ಎಐಸಿಸಿ ಜನರಲ್ ಕಾರ್ಯದರ್ಶಿ ರಣ್‌ದೀಪ್‌ ಸಿಂಗ್‌ ಸುರ್ಜೆವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಸಲೀಂ ಅಹ್ಮದ್ ತಿಳಿಸಿದರು.ಬೆಳಗಾವಿಯಲ್ಲಿ ಜನವರಿ 11 ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದ ಅವರು, 19 ರಂದು ಹಾವೇರಿಗೆ ಬಸ್ ಯಾತ್ರೆ ಬರಲಿದೆ. ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ಕಾಂಗ್ರೆಸ್‌ನ ಸಿದ್ಧಾಂತ ವಿಚಾರಧಾರೆಗಳನ್ನ ಜನರಿಗೆ ತಿಳಿಸುತ್ತೇವೆ. ಜನವರಿ 15 ರೊಳಗೆ 150 ಕ್ಷೇತ್ರಗಳ ಅಭ್ಯರ್ಥಿಗಳ ಅಂತಿಮಪಟ್ಟಿ ಸಿದ್ಧವಾಗುತ್ತದೆ. ಬಾಂಬೆ ಬಾಯ್ಸ್ ಮರಳಿ ಕಾಂಗ್ರೆಸ್‌ಗೆ ಬರುವುದಾದರೆ ಅರ್ಜಿ ಹಾಕಿ ಬರಬಹುದು ಎಂದು ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಜಿಎಫ್‌-2 ನಂತ 'ಮೈಂಡ್ ಲೆಸ್' ಚಿತ್ರ ನೋಡಲು ಬಯಸಲ್ಲ!

Fri Jan 6 , 2023
ಅಚ್ಚರಿ ಎಂದರೆ ನಟ ಕಿಶೋರ್​ ಅವರು ಈ ಸಿನಿಮಾವನ್ನು ವೀಕ್ಷಿಸಿಲ್ಲ. ಖಾಸಗಿ ಚಾನೆಲ್ ನಡೆಸಿದ ಸಂದರ್ಶನದಲ್ಲಿ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಸಿನಿಮಾ ಬಗ್ಗೆ ಇಡೀ ದೇಶವೇ ಮಾತನಾಡಿದೆ. ಕೋಟ್ಯಂತರ ಪ್ರೇಕ್ಷಕರು ‘ಕೆಜಿಎಫ್​ 2’ ನೋಡಿ ಮೆಚ್ಚಿಕೊಂಡಿದ್ದಾರೆ. ಅಚ್ಚರಿ ಎಂದರೆ ನಟ ಕಿಶೋರ್​ ಅವರು ಈ ಸಿನಿಮಾವನ್ನು ವೀಕ್ಷಿಸಿಲ್ಲ. ಖಾಸಗಿ ಚಾನೆಲ್ ನಡೆಸಿದ ಸಂದರ್ಶನದಲ್ಲಿ […]

Advertisement

Wordpress Social Share Plugin powered by Ultimatelysocial