{Pakistan}ಬಲೂಚಿಸ್ತಾನದಲ್ಲಿ ʼಗ್ರೆನೇಡ್‌ʼ ದಾಳಿ;

ಬಲೂಚಿಸ್ತಾನ(ಪಾಕಿಸ್ತಾನ): ಪಾಕಿಸ್ತಾನದ ಬಲೂಚಿಸ್ತಾನದ ಜಾಫರಾಬಾದ್ ಜಿಲ್ಲೆಯ ದೇರಾ ಅಲ್ಲಾಯಾರ್ ಪಟ್ಟಣದಲ್ಲಿ ಭಾನುವಾರ ಗ್ರೆನೇಡ್ ದಾಳಿ ನಡೆದಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 17 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರ ಪ್ರಕಾರ, ಅಪರಿಚಿತ ಮೋಟರ್‌ಸೈಕ್ಲಿಸ್ಟ್‌ಗಳು ಸುಬತ್‌ಪುರ ಚೌಕ್ ಬಳಿ ಹ್ಯಾಂಡ್ ಗ್ರೆನೇಡ್ ಎಸೆದರು. ಇದು ಸ್ಫೋಟಗೊಂಡು ಇಬ್ಬರು ಟ್ರಾಫಿಕ್ ಪೊಲೀಸ್ ಕಾನ್‌ಸ್ಟೆಬಲ್‌ಗಳು ಸೇರಿದಂತೆ 17 ಜನರು ಗಾಯಗೊಂಡಿದ್ದಾರೆ.ಸ್ಫೋಟದ ನಂತರ ಭದ್ರತಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು. ಗಾಯಗೊಂಡವರಲ್ಲಿ ಕನಿಷ್ಠ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.ಗಂಭೀರವಾಗಿ ಗಾಯಗೊಂಡವರನ್ನು ನಾವು ಲರ್ಕಾನಾಗೆ ಸ್ಥಳಾಂತರಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಅಬ್ದುಲ್ ರಶೀದ್, ಹಬೀಬುಲ್ಲಾ, ಕಾಂಡೋ, ಹೈದರ್ ಅಲಿ, ಮೊಹ್ಸಿನ್ ಅಲಿ, ಅಬ್ದುಲ್ ರಸೂಲ್, ಮುಹಮ್ಮದ್ ಅಲಿ, ಅಲ್ಲಾ ದೀನಾ, ವಜೀರ್ ಖಾನ್, ಮುಹಮ್ಮದ್ ಸರ್ವರ್, ರೆಹಮತ್ ಅಲಿ ಸೇರಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಭ್ರಷ್ಟಾಚಾರ ಆರೋಪ: ಮೌನ ಮುರಿದ ರವಿ.ಚನ್ನಣ್ಣನವರ್!ಬಿಚ್ಚಿಟ್ಟ ಸತ್ಯ

Mon Jan 31 , 2022
ಬೆಂಗಳೂರು: ಐಪಿಎಸ್​ ಅಧಿಕಾರಿ ರವಿ ಡಿ.ಚನ್ನಣ್ಣನವರ್​ ವಿರುದ್ಧ ಅಕ್ರಮ ಭೂಕಬಳಿಕೆ ಆರೋಪ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಕರ್ನಾಟಕದ ಸಿಂಗಂ ಎಂದೇ ಪ್ರಸಿದ್ಧಿಯಾಗಿರುವ ರವಿ ಚನ್ನಣ್ಣನವರ್​ ಅವರನ್ನ ಲೆಕ್ಕವಿಲ್ಲದಷ್ಟು ಮಂದಿ ರೋಲ್​ ಮಾಡೆಲ್​ ಆಗಿಸಿಕೊಂಡಿದ್ದಾರೆ.ಯೂತ್​ ಐಕಾನ್​ ಆಗಿ ಗುರುತಿಸಿಕೊಂಡ ರವಿ ವಿರುದ್ಧ ಭ್ರಷ್ಟಾಚಾರದ ಆರೋಪ ಜನಸಾಮಾನ್ಯರಲ್ಲೂ ಸಾಕಷ್ಟು ಪ್ರಶ್ನೆಗಳನ್ನ ಹುಟ್ಟುಹಾಕಿತ್ತು. ಕೊನೆಗೂ ಮೌನ ಮುರಿದ ರವಿ, ಪ್ರೆಸ್​ನೋಟ್​ನಲ್ಲಿ ಮಹತ್ವದ ವಿಚಾರ ತಿಳಿಸಿದ್ದಾರೆ.ಕೆಲ ವ್ಯಕ್ತಿಗಳು ನನ್ನ ಹಾಗೂ […]

Advertisement

Wordpress Social Share Plugin powered by Ultimatelysocial