ಭಾರತ ಟೆಸ್ಟ್ ತಂಡದ ಕಾಯಂ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ರಿಷಭ್ ಪಂತ್ ಚೇತರಿಸಿಕೊಳ್ಳದಿದ್ದಲ್ಲಿ ಆತನ ಬದಲಿಗೆ ಇಶಾನ್ ಕಿಶನ್ ಅವರನ್ನು ಭಾರತ ಆಯ್ಕೆ ಮಾಡಬೇಕು ಎಂದು ಮಾಜಿ ಆಯ್ಕೆಗಾರ ಸಬಾ ಕರೀಮ್ ಅಭಿಪ್ರಾಯಪಟ್ಟಿದ್ದಾರೆ.ಭಾರತವು ಫೆಬ್ರವರಿ 9ರಿಂದ ಮಾರ್ಚ್ 13ರವರೆಗೆ ತವರಿನಲ್ಲಿ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಆತಿಥೇಯ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ದೃಷ್ಟಿಯಿಂದ ಈ ಪಂದ್ಯಗಳು ಬಹಳ ಮಹತ್ವದ್ದಾಗಿರುತ್ತವೆ.ರಿಷಭ್ ಪಂತ್ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮತ್ತು ನಂತರದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಡುವುದು ಬಹುತೇಕ ವಿರಳವೆನಿಸಿದೆ.ರಿಷಭ್ ಪಂತ್ ಅವರ ಬ್ಯಾಕ್ಅಪ್ ಆಗಿ ಕೆಎಸ್ ಭರತ್ ಇತ್ತೀಚೆಗೆ ಭಾರತೀಯ ಟೆಸ್ಟ್ ತಂಡದಲ್ಲಿದ್ದರೆ, ರಿಷಭ್ ಪಂತ್ ಅಲಭ್ಯತೆಯ ಸಂದರ್ಭದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಇಶಾನ್ ಕಿಶನ್ ಅವರನ್ನು ಆಯ್ಕೆಮಾಡಲು ಭಾರತ ತಂಡ ನೋಡಬೇಕೆಂದು ಕರೀಮ್ ಸಲಹೆ ನೀಡಿದರು.ಇಶಾನ್ ಕಿಶನ್ ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿ ಋತುವಿನಲ್ಲಿ ಜಾರ್ಖಂಡ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada