ನವದೆಹಲಿ: ಮಹಿಳೆಯರಿಗೆ ಮೀಸಲಾತಿ ಕಲ್ಪಿಸೋ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ ನಂತ್ರ, ವಿಪಕ್ಷಗಳ ಗದ್ದಲ ಕೋಲಾಹದ ಸಂಸತ್ ನಲ್ಲಿ ಉಂಟಾಯಿತು. ಈ ಹಿನ್ನಲೆಯಲ್ಲಿ ಕಲಾಪವನ್ನು ನಾಳೆಗೆ ಸ್ಪೀಕರ್ ಮುಂದೂಡಿಕೆ ಮಾಡಿದ್ದಾರೆ.
ಸಂಸತ್, ವಿಧಾನಸಭೆಯಲ್ಲಿ ಶೇ.33ರಷ್ಟು ಮಹಿಳೆಯರಿಗೆ ಸ್ಥಾನದಲ್ಲಿ ಮೀಸಲಾತಿ ಕಲ್ಪಿಸೋ ಮಹತ್ವದ ಕಾಯ್ದೆಯನ್ನು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿತು.
ನೂತನ ಸಂಸತ್ ಭವನದಲ್ಲಿ ಸರ್ಕಾರವು ಮೊದಲ ಮಸೂದೆಯನ್ನ ಲೋಕಸಭೆಯ ಕಲಾಪಗಳಲ್ಲಿ ಪರಿಚಯಿಸಿತು. ಮೊದಲ ಮಸೂದೆ ಮಹಿಳಾ ಮೀಸಲಾತಿಗೆ ಸಂಬಂಧಿಸಿದ್ದು, ಇದಕ್ಕೆ ‘ನಾರಿ ಶಕ್ತಿ ವಂದನಾ ಕಾಯ್ದೆ’ ಎಂದು ಹೆಸರಿಡಲಾಗಿದೆ.
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು. ಈ ಮಸೂದೆಯಡಿ 181 ಲೋಕಸಭಾ ಸ್ಥಾನಗಳನ್ನ ಮಹಿಳೆಯರಿಗೆ ಮೀಸಲಿಡಲಾಗುವುದು. ವಿಧಾನಸಭೆಯ ಶೇ.33ರಷ್ಟು ಸ್ಥಾನಗಳನ್ನ ಮಹಿಳೆಯರಿಗೆ ಮೀಸಲಿಡಲಾಗಿದೆ. ದೆಹಲಿ ವಿಧಾನಸಭೆಯಲ್ಲಿ ಶೇಕಡಾ 33ರಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಲಿವೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ 84 ಸ್ಥಾನಗಳಲ್ಲಿ ಶೇ.33ರಷ್ಟು ಮಹಿಳೆಯರಿಗೆ ಮತ್ತು ಶೇ.33ರಷ್ಟು ಸ್ಥಾನಗಳನ್ನ ಪರಿಶಿಷ್ಟ ಪಂಗಡಗಳಿಗೆ ಮೀಸಲಿಡಲಾಗಿದೆ.
ಈ ಕಾಯ್ದೆಯನ್ನು ಮಂಡಿಸಿದ ಬಳಿಕ, ಲೋಕಸಭೆಯಲ್ಲಿ ಗದ್ದಲ, ಕೋಲಾಹರಕ್ಕೆ ಕಾರಣವಾದ ಕಾರಣ ಸ್ಪೀಕರ್ ಲೋಕಸಭಾ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಿದ್ದಾರೆ.