BSY ಆಪ್ತನ ಮನೆ ಮೇಲೆ ಐಟಿ ದಾಳಿಗೆ ಯಡಿಯೂರಪ್ಪನವರ ಮೊದಲ ಪ್ರತಿಕ್ರಿಯೆ;

ಶಿವಮೊಗ್ಗಆಪ್ತ ಸಹಾಯಕನಾಗಿದ್ದ ಉಮೇಶ್ ನಿವಾಸ, ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರಕ್ಕೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ನವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದರೂ ಐಟಿ ಅಧಿಕಾರಿಗಳು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಶಿವಮೊಗ್ಗದ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ತಪ್ಪು ಯಾರೇ ಮಾಡಿದ್ದರೂ ಐಟಿ ಅಧಿಕಾರಿಗಳು ಯಾರನ್ನೂ ಬಿಡಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಾರೆ. ಉಮೇಶ್ ನಾನು ಸಿಎಂ ಆಗಿದ್ದಾಗಲೂ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು. ಈಗ ಬೊಮ್ಮಾಯಿ ಸರ್ಕಾರದಲ್ಲೂ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಯಾವ ಕಾರಣಕ್ಕೆ ದಾಳಿ ನಡೆದಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು. ವಾಸ್ತವ ಸಂಗತಿ ಏನೆಂಬುದು ನನಗೆ ಗೊತ್ತಿಲ್ಲ. ಐಟಿ ಅಧಿಕಾರಿಗಳು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಐಟಿ ದಾಳಿ ಸಹಜವಾಗಿ ನಡೆಯುತ್ತಿರುತ್ತದೆ. ಇದಕ್ಕೂ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಇದು ರಾಜಕೀಯ ಪ್ರೇರಿತ ಐಟಿ ದಾಳಿ ಎಂಬುದು ಸುಳ್ಳು ಎಂದು ಬಿಎಸ್‌ ಯಡಿಯೂರಪ್ಪ ನವರು ಹೇಳಿದರು..

 

Please follow and like us:

Leave a Reply

Your email address will not be published. Required fields are marked *

Next Post

Seeing a Dutch Woman Will not be As Easy As this might sound

Fri Oct 8 , 2021
Dutch ladies are known for their particular beauty and intelligence. These women put in a lot of time and money in education and many of those have a Master’s degree. They also often show up at professional training and workshops. As a result, they are able to go to town […]

Advertisement

Wordpress Social Share Plugin powered by Ultimatelysocial