ಚಿಲ್ಲರೆ ಹಣ ಕೇಳಿದ್ದಕ್ಕೆ ಪ್ರಯಾಣಿಕನ ಮೇಲೆ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಮುಳುಬಾಗಿಲು ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಟಿಕೆಟ್ ಹಿಂದೆ ಐದು ರೂಪಾಯಿ ಚಿಲ್ಲರೆ ಬರೆದುಕೊಟ್ಟಿದ್ದ ಕಂಡಕ್ಟದ್ರು. ನಂತರ ನಿಲ್ದಾಣ ಬಂದಾಗ ಪ್ರಯಾಣ ಚಿಲ್ಲರೆ ಕೊಡುವಂತೆ ಕಂಡಕ್ಟರ್ ಬಳಿ ಕೇಳಿದ್ದಾನೆ . ಆಗ ಕಂಡಕ್ಟರ್ ಚಿಲ್ಲರೆ ಇಲ್ಲವೆಂದಿದ್ದು ಇಬ್ಬರ ನಡುವೆ ಇದೇ ವಿಚಾರಕ್ಕೆ ಪ್ರಯಾಣಿಕ ಹಾಗೂ ಕಂಡಕ್ಟರ್ ನಡುವೆ ಮಾತಿನ ಚಕಮಕಿ ನಡೆದು,ರಸ್ತೆಯಲ್ಲೇ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಸದ್ಯ ಈ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಇದನ್ನು ಓದಿ: ನಗರ ಪೊಲೀಸ್ ಕಟ್ಟಡ ಉದ್ಘಾಟನೆ: ಸಿಎಂ ಬಿಎಸ್ ವೈ ಯಿಂದ ಉದ್ಘಾಟನೆ